ಬೀದರ್:- ಕಳೆದೊಂದು ದಶಕದಿಂದ ಸಾಲದ ಸುಳಿಗೆ ಸಿಲುಕಿಕೊಂಡು ನರಳುತ್ತಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಶೀಘ್ರವೇ ಬಂದ್ ಆಗುವ ಸಾಧ್ಯತೆ ಇದ್ದು, ಕಾರ್ಮಿಕರ ಬದುಕು ಬೀದಿಗೆ ಬಂದಿದೆ.
ಪ್ಯಾರಿಸ್ ಒಲಿಂಪಿಕ್ಸ್ ಗೆ ಇಂದು ತೆರೆ: ಭಾರತಕ್ಕೆ ಒಲಿದ ಪದಕಗಳೆಷ್ಟು ಗೊತ್ತಾ!?
ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ, ಜಿಲ್ಲೆಯ ವಿವಿಧ ಬ್ಯಾಂಕ್ನಿಂದ ನೂರಾರು ಕೋಟಿ ರೂಪಾಯಿ ಸಾಲ ಮಾಡಿಕೊಂಡಿದೆ. ಅದರಲ್ಲಿಯೂ ವಿಶೇಷವಾಗಿ ಬೀದರ್ ಜಿಲ್ಲಾ ಸಹಕಾರಿ ಬ್ಯಾಂಕ್ನಿಂದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಆಢಳಿತ ಮಂಡಳಿಯವರು 143.33 ಎಕರೆಯಷ್ಟು ಜಮೀನನ್ನ ಅಡಮಾನವಾಗಿ ಇಟ್ಟು, ಡಿಸಿಸಿ ಬ್ಯಾಂಕ್ನಿಂದ 126.12 ಕೋಟಿ ರೂಪಾಯಿ ಸಾಲವನ್ನ ನೀಡಲಾಗಿತ್ತು. ಅಸಲು ಹಾಗೂ ಬಡ್ಡಿ ಸೇರಿಕೊಂಡು ಒಟ್ಟಾರೆ ಬಿಎಸ್ಎಸ್ಕೆ ಸಕ್ಕರೆ ಕಾರ್ಖಾನೆ ಮೇಲೆ 186 ಕೋಟಿ ರೂಪಾಯಿ ಸಾಲವಾಗಿತ್ತು. ಈ ಸಾಲವನ್ನ ಹಿಂದಿರುಗಿಸಲಾಗದ ಕಾರಣ, ಕಾರ್ಖಾನೆ, ಅಡಮಾನವಿಟ್ಟ ಜಮೀನು ಈಗ ಡಿಸಿಸಿ ಬ್ಯಾಂಕ್ ಹಸ್ತಾಂತರ ಮಾಡಿಕೊಂಡಿದೆ. ಹೀಗಾಗಿ ಈ ಕಾರ್ಖಾನೆ ಇನ್ನೂ ಮುಂದೆ ಆರಂಭವಾಗುವುದು ಡೌಟ್ ಇದ್ದು, ಸಂಪೂರ್ಣವಾಗಿ ಈ ಕಾರ್ಖಾನೆ ಮುಚ್ಚುವ ಹಂತಕ್ಕೆ ತಲುಪಿದೆ.
ರಾಜಕಾರಣಿಗಳ ಇಚ್ಚಾಶಕ್ತಿಯ ಕೊರೆತೆಯಿಂದ ಈ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಗೆ ಆಯ್ಕೆಯಾಗುವ ಆಢಳಿತ ಮಂಡಳಿಯವರ ಹಣದ ದಾಹಕ್ಕೆ ಈ ಕಾರ್ಖಾನೆ ಮುಚ್ಚಿದೆ ಎಂದು ಈ ಸಕ್ಕರೆ ಕಾರ್ಖಾನೆಯ ಷೇರುದಾರರು ಹೇಳುತ್ತಿದ್ದಾರೆ. ಈ ಸಕ್ಕರೆ ಕಾರ್ಖಾನೆಗೆ 173 ಕ್ಕೂ ಅಧಿಕ ಎಕರೆಯಷ್ಟು ಭೂಮಿಯಿದೆ. ಈ ಫೈಕಿ 143.33 ಎಕರೆಯಷ್ಟು ಜಮೀನನ್ನ ಸಕ್ಕರೆ ಕಾರ್ಖಾನೆ ಆಢಳಿತ ಮಂಡಳಿ ಭೂಮಿಯನ್ನ ಬ್ಯಾಂಕ್ಗೆ ಹಸ್ತಾಂತರ ಮಾಡಿದೆ. ಒಂದು ಕಾಲದಲ್ಲಿ ಸದೃಢವಾಗಿದ್ದ ಸಕ್ಕರೆ ಕಾರ್ಖಾನೆ, ಆಡಳಿತ ವೈಫಲ್ಯದಿಂದಾಗಿ ಸಾಲದ ಹೊರೆ ಹೆಚ್ಚಾಗಿ ಸಕ್ಕರೆ ಕಾರ್ಖಾನೆಯ ಆಸ್ತಿಯನ್ನ ಬ್ಯಾಂಕ್ ಮುಟ್ಟುಗೋಲು ಹಾಕಿಕೊಂಡಿದ್ದು, ಸಾಲದ ಹೊರೆಯಿಂದಾಗಿ ಕಾರ್ಖಾನೆ ಬಾಗಿಲು ಮುಚ್ಚಿಕೊಂಡಿದೆ
ಇಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಖಾಯಂ ಕಾರ್ಮಿಕರು 161, ಹಂಗಾಮಿ ಕಾರ್ಮಿಕರು 222 ಹಾಗೂ ಗುತ್ತಿಗೆ ಆದಾರದಲ್ಲಿ 4 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ, ಇವರೆಲ್ಲರಿಗೂ ಕೂಡ ಕಳೆದ ನಾಲ್ಕು ವರ್ಷದಿಂದ ಸಂಬಳವನ್ನ ನೀಡಿಲ್ಲ. ಹೀಗಾಗಿ ಇವರ ಬದುಕು ಮಾತ್ರ ಅಂತ್ರತ್ರ ಸ್ಥಿತಿಯಲ್ಲಿದೆ. ಈ ಕಾರ್ಖಾನೆಯ ಆಸ್ತಿಯನ್ನ ಸಾಲದಿಂದಾಗಿ ಬ್ಯಾಂಕ್ನವರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.