ಬೆಂಗಳೂರು:- ನಿಮಗೂ ಫ್ರೀ..ನಮಗೂ ಫ್ರೀ..ಎಲ್ಲರಿಗೂ ಫ್ರೀ ಎಂದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದ ಸರ್ಕಾರದ ವಿರುದ್ಧವೇ ಸ್ವಪಕ್ಷೀಯರು ಇದೀಗ ತಿರುಗಿಬಿದ್ದಿದ್ದಾರೆ.ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುವಂತೆ ಖುದ್ದು ಸಚಿವರೇ ಹೈಕಮಾಂಡ್ ಮೊರೆ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ಹಂತ ಹಂತವಾಗಿ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಲು ಸರ್ಕಾರ ಚಿಂತಿಸಿದೆ ಎನ್ನಲಾಗಿದೆ.
ಯೆಸ್,5 ಗ್ಯಾರಂಟಿ ಯೋಜನೆ ಜಾರಿ ಮಾಡುವುದಾಗಿ ರಾಜ್ಯದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಗ್ಯಾರಂಟಿ ಯೋಜನೆಯೇ ಸಂಕಷ್ಟ ತಂದಿದೆ.ವಾರ್ಷಿಕವಾಗಿ 60 ಸಾವಿರ ಕೋಟಿ ಗ್ಯಾರಂಟಿ ಯೋಜನೆ ವೆಚ್ಚ ಮಾಡೋದ್ರಿಂದ,ಶಾಸಕರಿಗೆ ವಿಶೇಷ ಅನುದಾನ ಕೊಡಲು ಸರ್ಕಾರದ ಬಳಿ ಹಣದ ಕೊರತೆ ಇದೆ. ಪದೇ ಪದೇ ಸರ್ಕಾರದ ವಿರುದ್ಧ ವಿಶೇಷ ಅನುದಾನ ನೀಡುವಂತೆ ಸ್ವಪಕ್ಷೀಯರು ಕೂಡ ಅಸಮಧಾನ ಹೊರ ಹಾಕುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಿನ್ನೆ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಭೇಟಿ ಮಾಡಿರುವ ಸಚಿವರಾದ ಸತೀಶ್ ಜಾರಕಿಹೊಳಿ,ಕೆ.ಎಚ್.ಮುನಿಯಪ್ಪ ಆಂಡ್ ಟೀಂ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದಾರೆ.
ಹೈಕಮಾಂಡ್ ಭೇಟಿ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ,ಕೆ.ಎಚ್.ಮುನಿಯಪ್ಪ,ಗ್ಯಾರಂಟಿ ಯೋಜನೆ ಬಗ್ಗೆ ಅಸಮಧಾನ ಹೊರ ಹಾಕಿದ್ದಾರೆ. ಗ್ಯಾರಂಟಿ ಯೋಜನೆಯಿಂದಾಗಿ ಬೇರೆ ಅಭಿವೃದ್ಧಿಗೆ ಅನುದಾನದ ಕೊರತೆ ಉಂಟಾಗಿದೆ.ಗ್ಯಾರಂಟಿ ಯೋಜನೆಯಿಂದ ಶ್ರೀಮಂತರನ್ನು ಕೈ ಬಿಟ್ರೆ,ವಾರ್ಷಿಕವಾಗಿ 20 ಸಾವಿರ ಕೋಟಿ ಹಣ ಉಳಿತಾಯ ಆಗಲಿದೆ ಎಂದಿದ್ದಾರೆ. ವೈಜ್ಞಾನಿಕ ಮಾನದಂಡ ರೂಪಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿ ಎಂದು ಹೈಕಮಾಂಡ್ ಬಳಿಕ ಸಚಿವರು ಆಗ್ರಹ ಮಾಡಿದ್ದಾರೆ.
ಇನ್ನು ಗ್ಯಾರಂಟಿ ಯೋಜನೆಗೆ ಕತ್ತರಿ ಹಾಕುವಂತೆ ಹೈಕಮಾಂಡ್ ಮೊರೆ ಹೋಗಿದ್ದ ಸಚಿವರ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ.ಅದೆಲ್ಲಾ ಸುಳ್ಳು.ಪಕ್ಷದ ಅಧ್ಯಕ್ಷನಾಗಿ ನಾನು ಹೇಳ್ತಿದ್ದೇನೆ.ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ.ಕೆಲವು ಕಡೆ ಆದಾಯ ಹೆಚ್ಚಿರೋರು ಕೂಡ ಗ್ಯಾರಂಟಿ ಯೋಜನೆ ಪಡೆಯುತ್ತಿರುವ ಬಗ್ಗೆ ದೂರು ಬಂದಿದೆ.ಅದನ್ನ ನಾವು ಪರಿಶೀಲನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇನ್ನು ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗ್ಗೆ ಸರ್ಕಾರ ಮಾತನಾಡುತ್ತಿದೆ ಎಂದು ಕೈ ನಾಯಕರಿಗೆ ಕಮಲ ನಾಯಕರು ಟಾಂಗ್ ಕೊಟ್ಟಿದ್ದಾರೆ. ಒಟ್ಟಾರೆ, ಗ್ಯಾರಂಟಿ ಯೋಜನೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಇದೀಗ ಅಸಮಧಾನ ಸ್ಪೋಟವಾಗಿದ್ದು,ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಲೇಬೇಕೆಂದು ಕೆಲವರು ಒತ್ತಡ ಹಾಕುತ್ತಿದ್ದಾರೆ.