ಬೆಂಗಳೂರು:- ದಯವಿಟ್ಟು ರಸ್ತೆ ಗುಂಡಿ ಮುಚ್ಚಿ” ಅಂತ ಸಚಿವ ಕೃಷ್ಣ ಬೈರೇಗೌಡರು ಟ್ವೀಟ್ ಮಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ ಅಂತ ಓಡಾಡ್ತಿದ್ದಾರೆ. ಆದರೆ ರಸ್ತೆ ಸೇರಿದಂತೆ ಮೂಲಭೂತ ಅಗತ್ಯತೆಗಳೇ ಬೆಂಗಳೂರಲ್ಲಿ ಸರಿಯಾಗಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ. ರಸ್ತೆ ಗುಂಡಿ ಮುಚ್ಚಿ ಅಂತ ಕೋರ್ಟೇ ತಾಕೀತು ಮಾಡಿದ್ರೂ ಬಿಬಿಎಂಪಿ ತಲೆಕೆಡಿಸಿಕೊಳ್ಳುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗಲೇ ಖುದ್ದು ಸಚಿವ ಕೃಷ್ಣ ಬೈರೇಗೌಡರೇ“ದಯವಿಟ್ಟು ರಸ್ತೆ ಗುಂಡಿ ಮುಚ್ಚಿ” ಅಂತ ಅಸಹಾಯಕರಾಗಿ ಟ್ವೀಟ್ ಮಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿಕೂಸು ಬ್ರಾಂಡ್ ಬೆಂಗಳೂರು ಅಂದ್ರೆ ಇದೆನಾ? ಎನ್ನುವ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಇದಕ್ಕೆ ಕಾರಣ ಸಚಿವ ಕೃಷ್ಣ ಬೈರೇಗೌಡ ಅವರು ಮಾಡಿರುವ ಟ್ವೀಟ್. ಸಿದ್ದರಾಮಯ್ಯ ಸಂಪುಟದ ಸಚಿವರೇ ರಸ್ತೆ ಗುಂಡಿ ಮುಚ್ಚಿ ಅಂತಾ ಕೇಳಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ಯಾ ಎಂಬ ಚರ್ಚೆ ಇದೀಗ ಶುರುವಾಗಿದೆ.
ರಸ್ತೆ ಗುಂಡಿ ಮುಚ್ಚಿಸಿ ಅಂತ ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದ್ದಾರೆ. ಬಿಎಂಆರ್ಸಿಎಲ್ ಆಗಲಿ, ಬಿಬಿಎಂಪಿ ಆಗಲಿ ರಸ್ತೆ ಗುಂಡಿ ಮುಚ್ಚಿ ಅಂತ ಕೃಷ್ಣಬೈರೇಗೌಡ ಟ್ವೀಟ್ ಮಾಡಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆ ಗುಂಡಿ ಮುಚ್ಚಿ ಅಂತ ಸಚಿವ ಕಷ್ಣ ಬೈರೇಗೌಡ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ವೀ ರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸರ್ವಜನಿಕರು ನನಗೆ ಕಳಿಸಿದ್ದಾರೆ. @BBMPCOMM ಅಥವಾ @OfficialBMRCL MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿ ಮುಚ್ಚುವ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಅಂತ ಟ್ವೀಟ್ ಮಾಡಿ, ಸಚಿವರು ಮನವಿ ಮಾಡಿದ್ದಾರೆ.