ಬೆಂಗಳೂರು:- ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆ ನಿಲ್ಲುತ್ತಿದ್ದಂತೆಯೇ ಸೆಕೆಯ ಅನುಭವವಾಗುತ್ತಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಮಧ್ಯೆಯೇ ತಾಪಮಾನವು ಗಗನಕ್ಕೇರುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.
ಮುಂದೆ ಜಮೀರ್ ಸಿಎಂ ಆಗ್ತಾರೆ, ಸಿದ್ದರಾಮಯ್ಯರನ್ನು ಚಹಾ ಕೊಡಲು ಇಡ್ಕೋತ್ತಾರೆ- ಯತ್ನಾಳ್!
ಬೆಂಗಳೂರಿನಲ್ಲಿ ಆಗಸ್ಟ್ 15 ರಂದು ಗರಿಷ್ಠ ತಾಪಮಾನ 29.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದು ಸಾಮಾನ್ಯವಾಗಿ ಇರುವ ತಾಪಮಾನಕ್ಕಿಂತ 1.4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಆಗಸ್ಟ್ 14 ರಂದು, ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇತ್ತು. ಇದು ಸಾಮಾನ್ಯಕ್ಕಿಂತ 2.8 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಬುಧವಾರ ಮತ್ತು ಗುರುವಾರ ಕನಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ಇತ್ತು. ಇದು, ಸಾಮಾನ್ಯಕ್ಕಿಂತ 2.4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.
ಇನ್ನೂ ಮೂರು ದಿನಗಳ ಕಾಲ ಇದೇ ರೀತಿಯ ತಾಪಮಾನ ಇರಲಿದೆ. ನಂತರ ಮುಂಗಾರು ಮಳೆ ಮತ್ತೆ ಚುರುಕಾಗಲಿದ್ದು ತಾಪಮಾನದಲ್ಲಿ ತುಸು ಇಳಿಕೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.