ಬೆಂಗಳೂರು:- ವೈದ್ಯಕೀಯ ಸಂಘ ಇಂದು ಮುಷ್ಕರ ನಡೆಸಲು ಮುಂದಾಗಿದ್ದು, ಹೀಗಾಗಿ ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಯಾವುದೇ ಸೇವೆಗಳು ಲಭ್ಯವಿರುವುದಿಲ್ಲ.
ಕರ್ನಾಟಕದಾದ್ಯಂತ ಒಪಿಡಿ ಸೇವೆ ಬಂದ್: ಯಾವೆಲ್ಲ ಸೇವೆಗಳು ಲಭ್ಯ, ಏನೆಲ್ಲ ಇರಲ್ಲ? ಇಲ್ಲಿದೆ ಡೀಟೈಲ್ಸ್!
ಕೋಲ್ಕತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಫತ್ರೆಗಳ ಓಪಿಡಿ ಬಂದ್ ಇರಲಿದ್ದು, ಎಮರ್ಜೆನ್ಸಿ ಪೇಷೆಂಟ್ಗೆ ಮಾತ್ರ ಟ್ರೀಟ್ಮೆಂಟ್ ಸಿಗಲಿದೆ. ಎಲ್ಲಾ ವೈದ್ಯರು ಓಪಿಡಿ ಸೇವೆಗಳಿಗೆ ಹಾಜರಾಗದೆ, ಐಎಂಎ, ಫ್ರೀಡಂ ಪಾರ್ಕ್ಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಇನ್ನೂ ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನ್ನ ಮಾತ್ರ ನೀಡಲಿದ್ದಾರೆ.
ಟ್ರೈನಿ ವೈದ್ಯೆ ಹತ್ಯೆ, ಅತ್ಯಾಚಾರ ಖಂಡಿಸಿ ಶಿವಾಜಿ ನಗರದ ಅಟಲ್ ಬಿಹಾರಿ ವೈದ್ಯಕೀಯ ಕಾಲೇಜ್ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದರು. ಕ್ಯಾಂಡಲ್ ಹಿಡಿದು ವೈದ್ಯ ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಆಗ್ರಹಿಸಿದ್ರು. ಬೌರಿಂಗ್ ಆಸ್ಪತ್ರೆ ಮುಂಭಾಗದಲ್ಲಿ 700ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಜಾಥಾ ನಡೆಸಿದ್ದಾರೆ.
ಇಂದು ಭಾರತೀಯ ವೈದ್ಯಕೀಯ ಸಂಘ ವತಿಯಿಂದ ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಆರೋಗ್ಯ ಇಲಾಖೆ ಆದೇಶಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಸುತ್ತೋಲೆ ಹೊರಡಿಸಿದೆ. ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸೂಚನೆ ನೀಡಿದೆ. ತುರ್ತು ವೈದ್ಯಕೀಯ ಸೇವೆಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಹೇಳಿದೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನಿಂದ ಬಂದ್ಗೆ ಕರೆ ನೀಡಿದ ಹಿನ್ನೆಲೆ ಹುಬ್ಬಳ್ಳಿ ವಿವಿಧ ಆಸ್ಪತ್ರೆಗಳು ಬಂದ್ಗೆ ಬೆಂಬಲ ನೀಡಿವೆ. 24 ತಾಸುಗಳ ವೈದ್ಯಕೀಯ ಸೇವೆ ಬಂದ್ಗೆ ಕರೆ ಕೊಡಲಾಗಿದೆ. ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜು, ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳು ಬಂದ್ ಆಗುವ ಸಾಧ್ಯತೆ ಇದೆ.