ಚೆಕ್ ಬೌನ್ಸ್ ಕೇಸ್ ನಲ್ಲಿ ರಾಬಿನ್ ಉತ್ತಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ.
ಕನ್ನಡಿಗ ರಾಬಿನ್ ಉತ್ತಪ್ಪ ಅವರಿಗೆ ಮ್ಯಾಜಿಸ್ಟ್ರೇಟ್ ನೀಡಿದ್ದ ಜಾಮೀನು ರಹಿತ ವಾರೆಂಟ್ಗೆ ಮುಂಬೈ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ಅವರು ನಿರಾಳರಾಗಿದ್ದಾರೆ. ಉತ್ತಪ್ಪ ವಿರುದ್ಧದ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು.
ಮಳೆಹಾನಿ ಪ್ರದೇಶಕ್ಕೆ ತಡವಾಗಿ ಬಂದ ಬಿಜೆಪಿ ಶಾಸಕ: ಗ್ರಾಮಸ್ಥರಿಂದ ತರಾಟೆ, ನಾಯಿ ಎಂದು ನಿಂದಿಸಿದ ಹರೀಶ್ ಪೂಂಜಾ!
ನ್ಯಾಯಮೂರ್ತಿ ನೀಲಾ ಘೋಖಲೆ ನೇತೃತ್ವದ ಪೀಠ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದು, ಉತ್ತಪ್ಪ ಪರ ವಕೀಲರು ಸೆಪ್ಟೆಂಬರ್ 6ರೊಳಗೆ ವಿಚಾರಣೆಗೆ ಹಾಜರಾಗುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧದ ಜಾಮೀನು ರಹಿತ ಬಂಧನ ವಾರೆಂಟ್ಗೆ ತಡೆ ನೀಡಲಾಗಿದೆ.
ರಾಬಿನ್ ಉತ್ತಪ್ಪ ಮಧ್ಯವರ್ತಿ ಕಂಪನಿ ಮೂಲಕ ಸೆನಾಟರ್ ಪ್ರವೇಟ್ ಲಿಮಿಟೆಡ್ ಕಂಪನಿ ಜತೆ ಉಡುಪುಗಳ ರಾಯಭಾರಿಯಾಗಿ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಕಂಪನಿ ಜತೆ ಉತ್ತಪ್ಪ ಸಂಬಂಧ ಕಡಿದುಕೊಂಡಿದ್ದರು. ಆದರೆ, ಆ ಬಳಿಕ ನಡೆದ ಪತ್ರ ವ್ಯವಹಾರಗಳು ಉತ್ತಪ್ಪ ಗಮನಕ್ಕೆ ಬಂದಿರಲಿಲ್ಲ. ಸಮನ್ಸ್ ಮತ್ತು ವಾರಂಟ್ಗಳು ಸೆಂಟಾರಸ್ನ ನೋಂದಾಯಿತ ಕಚೇರಿಗೆ ಹೋಗುತ್ತಿದ್ದವು. ಹೀಗಾಗಿ ಉತ್ತಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಉತ್ತಪ್ಪ ಅವರು ಏಪ್ರಿಲ್ 28, 2024 ರಂದು ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಕರೆ ಮಾಡಿದಾಗ ಮಾತ್ರ ಬಾಕಿ ಇರುವ ಘೋಷಣೆ ಮತ್ತು ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿರುವುದು ತಿಳಿದುಕೊಂಡಿದ್ದಾರೆ.
ನಂತರ ಉತ್ತಪ್ಪ ಜಾಮೀನು ರಹಿತ ವಾರೆಂಟ್ ರದ್ದುಗೊಳಿಸುವಂತೆ ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಆದರೆ ಅವರ ವಿನಂತಿಯನ್ನು ತಿರಸ್ಕರಿಸಲಾಗಿತ್ತು. ಸದ್ಯ ಉತ್ತಪ್ಪ ಜಾಮೀನು ರಹಿತ ಬಂಧನ ವಾರೆಂಟ್ನಿಂದ ಮುಕ್ತರಾಗಿದ್ದಾರೆ