ಬಾಗಲಕೋಟ:- ಸಿಎಂ ಸಿದ್ದು ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನಲೆ ಸೈದಾಪುರ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
Clutch: ಗಮನಿಸಿ.. ಕಾರಿನ ಕ್ಲಚ್ ಬಳಸುವಾಗ ಈ ತಪ್ಪುಗಳನ್ನು ಮಾಡಬೇಡಿ..!
ಬಾಗಲಕೋಟೆ ಜಿಲ್ಲೆ ತೇರದಾಳ ಕ್ಷೇತ್ರದ ಸೈದಾಪುರ ವ್ಯಾಪ್ತಿಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗಿದೆ. ಹೆದ್ದಾರಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಲಾಗಿದೆ.
ಸಿದ್ದರಾಮಯ್ಯ ಅವರನ್ನ ರಾಜಕೀಯವಾಗಿ ಮುಗಿಸಲು ರಾಜಭವನ ದುರ್ಬಳಿಕೆ ಎಂದು ಬಿಜೆಪಿ ವಿರುದ್ದ ಕಿಡಿಕಾರಿದರು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಆಗಿ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಕೊಡಲು ಬಿಜೆಪಿ, ಜೆಡಿಎಸ್ ಕೈವಾಡ ಇದೆ ಎಂದು ಆರೋಪ ಮಾಡಿದ್ದಾರೆ.
ರಾಜ್ಯಪಾಲರು, ಬಿಜೆಪಿ, ಜೆಡಿಎಸ್ ವಿರುದ್ಧ ನಡೆದ ಪ್ರತಿಭಟನೆ ಇದಾಗಿದೆ.