ಮಂಗಳೂರು: ಮೂಡಾ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಶುರುವಾಗಿ ಲಾಲ್ ಬಾಗ್ನ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ವರೆಗೆ “ಪಾದಯಾತ್ರೆ ನಡೆಯಿತು.
Ginger, Garlic Paste: ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಬೇಗ ಹಾಳಾಗದೆ ಫ್ರೆಶ್ ಆಗಿ ಇರ್ಬೇಕು ಅಂದ್ರೆ ಹೀಗೆ ಮಾಡಿ..!
ಈ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ, ಎಂಎಲ್ ಸಿ ಐವನ್ ಡಿಸೋಜಾ, ಮಮತಾ ಗಟ್ಟಿ, ಜಿಎ ಬಾವಾ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆದ ಘಟನೆ ಮಂಗಳೂರಿನ ಲಾಲ್ ಬಾಗ್ ಜಂಕ್ಷನ್ ಬಳಿ ನಡೆದಿದೆ. ಪಾದಯಾತ್ರೆ ಬಳಿಕ ಸಭೆ ಮುಗಿದ ಮಧ್ಯೆ ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆಯಲಾಗಿದೆ. ಜೊತೆಗೆ ಟೈರ್ ಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.