ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೆಡೆ ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದೆ. . ಅರ್ಧಗಂಟೆಯಿಂದ ಸತತವಾಗಿ ಮಳೆ ಸುರಿಯುತ್ತಿದೆ. ಕೆಲ ಏರಿಯಾಗಳಲ್ಲಿ ಅಬ್ಬರಿಸುತ್ತಿದ್ದಾನೆ ವರುಣ.ಎಷ್ಟು ಜೋರು ಮಳೆ ಅಂದ್ರೆ ಕೆಲವೇ ನಿಮಿಷಕ್ಕೆ ಹೆಬ್ಬಾಳದ ರಸ್ತೆ ಸಂಪೂರ್ಣ ಜಲಾವೃತ ಆಗಿತ್ತು.
ಬೆಂಗಳೂರಿನ ಕಂಟೋನ್ಮೆಂಟ್, ರಾಜಾಜಿನಗರ, ಮಲ್ಲೇಶ್ವರ, ಗಾಯತ್ರಿ ನಗರ, ವಸಂತನಗರ, ಬಾಣಸವಾಡಿ, ಎಚ್ಬಿಆರ್ ಲೇಔಟ್, ಕಮ್ಮನಹಳ್ಳಿ, ಲಿಂಗರಾಜಪುರ, ಬಿಟಿಎಂ ಲೇಔಟ್, ಜಯನಗರ, ಬಸವೇಶ್ವರ ನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ, ನಾಯಂಡನಹಳ್ಳಿ, ಸದಾಶಿವನಗರ, ಕಾಮಾಕ್ಷಿಪಾಳ್ಯ, ಶೇಷಾದ್ರಿಪುರ, ಶಿವಾಜಿನಗರ, ಬೆಳ್ಳಂದೂರು, ಸಿವಿ ರಾಮನ್ ನಗರ, ಮಾರತ್ತಹಳ್ಳಿ, ವೈಟ್ಫೀಲ್ಡ್, ಕಲ್ಯಾಣ ನಗರ, ಹೆಬ್ಬಾಳ, ಮತ್ತಿಕೆರೆ, ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಕೊತ್ತನೂರು ಮತ್ತು ಆರ್ಆರ್ ನಗರ ಸೇರಿ ಹಲವೆಡೆ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಸುರಿದ ಭಾರೀ ಮಳೆಗೆ ಯಶವಂತಪುರ, ಹೆಬ್ಬಾಳ ಅಂಡರ್ ಪಾಸ್ನಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಕಿ.ಮೀಟರ್ ಗಟ್ಟಲೆ ವಾಹನ ಸವಾರರು ಕ್ಯೂ ನಿಂತಿದ್ರೆ, ಟ್ರಾಫಿಕ್ ಕ್ಲಿಯರ್ ಮಾಡಲು ಸಂಚಾರಿ ಪೊಲೀಸರು ಹರಸಾಹಸಪಟ್ಟಿದ್ದಾರೆ.