ದಾಸರಹಳ್ಳಿ: ಇಲ್ಲಿನ ಪ್ರಸಿದ್ಧ ಬಾಗಲಗುಂಟೆ ಮಾರಮ್ಮ ದೇವಲಯದ ಬೀಗ ಹೊಡೆದು ಖದೀಮರು ಹುಂಡಿ ಹಣ ಕಳ್ಳತನ ಮಾಡಿರುವ ಘಟನೆ ಇಂದು ಬೆಳಗಿನ ಜಾವ 3:30ರ ಸುಮಾರಿನಲ್ಲಿ ಜರುಗಿದೆ.
ಮೋದಿ ಹಾಸಿಗೆ, ದಿಂಬು ಹಿಡಿದು ಓಡಬೇಕಾದ ಪರಿಸ್ಥಿತಿ ಬರುತ್ತೆ : ಕಾಂಗ್ರೆಸ್ ಯುವ ನಾಯಕ!
ದೇವಾಲಯದ ಎರಡು ಹುಂಡಿಯಲ್ಲಿದ್ದ
20ಲಕ್ಷಕ್ಕೂ ಹೆಚ್ಚು ಹಣ ಕಳ್ಳತನ ಮಾಡಲಾಗಿದೆ. ಅರ್ಚಕ ಮಹೇಂದ್ರ ಪೂಜೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಮುಜರಾಯಿ ಇಲಾಖೆ ಸುಪರ್ದಿಯಲ್ಲಿರುವ ಮಾರಮ್ಮ ದೇವಾಲಯ ಇದ್ದು, ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರ ಮನವಿ ಮಾಡಿದ್ದಾರೆ. ಇನ್ನೂ ದೇವಲಯಕ್ಕೆ ಸೂಕ್ತ ಭದ್ರತೆ ಕಲ್ಪಿಸದ ತಹಸಿಲ್ದಾರ್ ವಿರುದ್ಧ ಗ್ರಾಮಸ್ಥರು ಅಕ್ರೋಶ ಹೊರ ಹಾಕಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.