ಬೆಂಗಳೂರು :- ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಸ್ಟಾಪ್ ಆಗಿದೆ. ವರಮಹಾಲಕ್ಷ್ಮಿ ಹಬ್ಬಕ್ಕಾದರೂ ಹಣ ಬರಬಹುದು ಅಂತ ಗೃಹಿಣಿಯರು ಕಾಯುತ್ತಿದ್ದರು.
ಆದ್ರೆ ಹಣ ಮಾತ್ರ ಬರಲೇ ಇಲ್ಲ. ಪ್ರತಿದಿನ ಖಾತೆಗೆ ಹಣ ಬಂದಿದ್ಯಾ ಇಲ್ವಾ – ಅಂತ ಕಳೆದ 15 ದಿನಗಳಿಂದ ಗೃಹಲಕ್ಷ್ಮೀ ಫಲಾನುಭವಿಗಳು ಪ್ರತಿದಿನ ಬ್ಯಾಂಕಿಗೂ- ಮನೆಗೂ ಅಲೆದಾಡುತ್ತಿದ್ದಾರೆ. ಆದ್ರೆ ಎಷ್ಟೇ ಬ್ಯಾಂಕ್ ಗಳಿಗೆ ಎಷ್ಟೇ ಅಲೆದ್ರು ಹಣ ಮಾತ್ರ ಖಾತೆಗೆ ಬಂದಿಲ್ಲ. ಹೀಗಾಗಿ ಸರ್ಕಾರದ ವಿರುದ್ದ ಮಹಿಳೆಯರು ಬೇಸರಗೊಂಡಿದ್ದಾರೆ.
ಸರ್ಕಾರ ಅಧಿಕಾರಕ್ಕೆ ಬರುವ ಸಲುವಾಗಿ ಸಾಲು ಸಾಲು ಯೋಜನೆಗಳನ್ನ ತಂದ್ರು. ಆದ್ರೆ ಒಂದೊಂದು ಯೋಜನೆಗಳನ್ನ ಸರ್ಕಾರದ ಬಳಿ ಬೇಡಿ ಪಡೆಯುವ ಪರಿಸ್ಥಿತಿ ಎದುರಾಗಿದೆ. ಈ ರೀತಿಯ ಸ್ಕೀಮ್ ಗಳನ್ನ ಜಾರಿ ಮಾಡುವ ಬದಲು ಬೆಲೆ ಏರಿಕೆಯನ್ನಾದ್ರು ಕಡಿಮೆ ಮಾಡಿದ್ರೆ ಎಷ್ಟೋ ಜನರಿಗೆ ಅನುಕೂಲವಾಗುತ್ತಿತ್ತು. ಒಂದು ಸ್ಕೀಮ್ ನಾ ಹಣವಾದ್ರು ಸರಿಯಾಗಿ ಖಾತೆಗಳಿಗೆ ಬಂದ್ರೆ ಬೆಲೆ ಏರಿಕೆಯಿಂದ ಬಚಾವ್ ಆಗಬಹುದು. ಆದ್ರೆ ಯಾವ ಸ್ಕೀಮ್ ತುಂಬ ದಿನಗಳ ಕಾಲ ಉಳಿಯುತ್ತೆ ಅಂತನೇ ಅನ್ನುಸ್ತಾ ಇಲ್ಲಾ ಎನ್ನುವುದು ಗೃಹಿಣಿಯರ ಮಾತು.
ಇನ್ನು, ಕುರಿತಾಗಿ ಮಾತಾನಾಡಿರುವ ಲಕ್ಷ್ಮಿ ಹೆಬ್ಬಾಳ್ಕಾರ್ ಹಣವನ್ನ ಬಿಡುಗಡೆ ಮಾಡಿದ್ದೇವೆ. ಕೆಲವೊಬ್ಬರಿಗೆ ಹಣ ಬಂದಿದೆ. ಕೆಲವೊಬ್ಬರಿಗೆ ಹಣ ಬಂದಿಲ್ಲ. ಸದ್ಯ ಎಲ್ಲಾ ಖಾತೆಗಳಿಗೂ ಹಣ ಹೋಗುವುದಕ್ಕೆ ಎಲ್ಲಾ ಪ್ರಕ್ರಿಯೆಗಳನ್ನ ಮಾಡಲಾಗುತ್ತಿದೆ. ಸದ್ಯ ಒಂದು ತಿಂಗಳ ಹಣವನ್ನ ಹಾಕಿದ್ದೇವೆ. ಮುಂದಿನ ತಿಂಗಳು ಉಳಿದ ಹಣವನ್ನ ಹಾಕತ್ತೇವೆ ಎಂದು ಹೇಳಿದ್ದಾರೆ.
ಒಟ್ನಲ್ಲಿ, ಗೃಹಲಕ್ಷ್ಮಿ ಹಣವನ್ನ ಖಾತೆಗೆ ಹಾಕುವ ಪ್ರೋಸೆಸ್ 15 ದಿನಗಳಿಂದ ಆರಂಭವಾಗಿದ್ದು, ಇನ್ನು 15 ದಿನಗಳಲ್ಲಿ ಎಲ್ಲರ ಖಾತೆಗೆ ಹಣ ಜಮಾವಣೆಯಗುವ ಭರವಸೆಯನ್ನ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದು, ಹೇಳಿದಂತೆ ಖಾತೆಗೆ ಹಣ ಬರುತ್ತಾ ಕಾದುನೋಡ್ಬೇಕಿದೆ.