ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದರ್ಶನ್ ಗೆ ಸಂಕಷ್ಟ ಎದುರಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಈಗಾಗಲೇ ಪವಿತ್ರಾ ಗೌಡ ಎ1 ಆಗಿದ್ದರೆ, ದರ್ಶನ್ ಎ2 ಆಗಿದ್ದರು. ಆದರೆ ದರ್ಶನ್ ಅವರನ್ನೇ ಎ1 ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ತನಿಖೆ ವೇಳೆ ಕೊಲೆ ಕೇಸ್ನಲ್ಲಿ ದರ್ಶನ್ ಭಾಗಿಯಾಗಿರೋ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಲಭ್ಯವಾಗುತ್ತಿವೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ಗೆ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗುತ್ತಿದೆ. ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಎ1 ಆಗಿದ್ದರೆ, ನಟ ದರ್ಶನ್ ಎ2 ಆಗಿದ್ದರು. ಆದರೆ ಈವರೆಗೆ ಲಭ್ಯವಾಗಿರುವ ಸಾಕ್ಷ್ಯಗಳ ಆಧಾರದ ಮೇಲೆ ದರ್ಶನ್ ಎ1 ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ರೇಣುಕಾಸ್ವಾಮಿ ಹತ್ಯೆಯಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿರೋ ಬಗ್ಗೆ ಪ್ರಬಲ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ ಎನ್ನಲಾಗಿದೆ. ಈ ಆಧಾರದ ಮೇಲೆ ಎ2 ಆಗಿದ್ದ ದರ್ಶನ್ ಅವರನ್ನು ಎ1 ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ವಿನಯ್, ಪವನ್ ಹಾಗೂ ಪ್ರದೂಷ್ ಕೂಡ ದರ್ಶನ್ ನಂತರ ಬರೋ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಎಫ್ ಎಸ್ ಎಲ್ ಅಧಿಕಾರಿಗಳ ಮೊಬೈಲ್ ರಿಟ್ರೀವ್ ವೇಳೆ ಸ್ಫೋಟಕ ವಿಚಾರ ಬಯಲಾಗಿದೆ. ಎರಡು ಮೊಬೈಲ್ ಫೋನ್ನಲ್ಲಿ ರೇಣುಕಾಸ್ವಾಮಿಯ ನಾಲ್ಕು ಫೋಟೋಗಳು ಪತ್ತೆಯಾಗಿವೆ ಎನ್ನಲಾಗಿದೆ.