ಕೋಲಾರ: ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಮಾಡಿದ ಅವಮಾನವನದನು ಖಂಡಿಸಿ ಮೂಡಾ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ನವರ ರಾಜೀನಾಮೆಗೆ ಒತ್ತಾಯಿಸಿ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಕೋಲಾರ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ನಡೆಸಿದ್ರು.ನಗರದ ಹೊಸ ಬಸ್ ನಿಲ್ದಾಣದಲ್ಲಿ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಚಿವ ಕೃಷ್ಣವೈರೇಗೌಡ ಸಚಿವ ಜಮೀರ್ ಅಹಮದ್ ವಿರುದ್ದ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಕೃಷ್ಣಬೈರೇಗೌಡ ರಾಜ್ಯಪಾಲರನ್ನು ನಾಲಾಯಕ್ ಎಂದು ಕರೆದಿರುವುದು ಖಂಡನೀಯ ಈ ಕೂಡಲೆ ಅವರು ರಾಜ್ಯಪಾಲರಿಗೆ ಕ್ಷಮೆಯಾಚಿಸಬೇಕು ಎಂದರು. ಈ ಕೂಡಲೇ ಪೋಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಎಲ್ಲರ ಮೇಲು ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ರು. ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅದ್ಯಕ್ಷ ಡಾ ವೇಣುಗೋಪಾಲ್, ಮಾಜಿ ಶಾಸಕ ಸಂಪಂಗಿ, ನಗರಾಭಿವೃದ್ಧಿ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.