ಬೆಂಗಳೂರು: ಒಂದೆಡೆ ಬಾಕಿ ಕೇಸ್ಗಳ ಇತ್ಯರ್ಥಕ್ಕೆ ರಾಜ್ಯಪಾಲರಿಗೆ ಸಲಹೆ ಕೊಟ್ಟಿರೋ ಸರ್ಕಾರ ಇನ್ನೊಂದೆಡೆ, ಪೋಕ್ಸೋ ಕೇಸಲ್ಲಿ ಯಡಿಯೂರಪ್ಪ ಬಂಧಿಸಿದಂತೆ ನೀಡಿರೋ ಮಧ್ಯಂತರ ರಕ್ಷಣೆ ತೆರವು ಕೋರಿ ಹೈಕೋರ್ಟ್ ಮೆಟ್ಟಿಲೇರಿದೆ. ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ಸಿಐಡಿ ಎಸ್ಪಿಪಿ ಎಸ್ಪಿಪಿ ಅಶೋಕ್ ನಾಯ್ಕ್ ಅವರಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಪುರುಷರೇ ಹುಷಾರ್.. ಬಿಸಿ ನೀರಿನಲ್ಲಿ ಸ್ನಾನ ಮಾಡಿದ್ರೆ ವೀರ್ಯ ಉತ್ಪಾದನೆ ಕಡಿಮೆಯಾಗುತ್ತಾ..? ಈ ಸ್ಟೋರಿ ನೋಡಿ
ಈ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಬಿಎಸ್ವೈ ಪರ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿದೆ. ಇದರಿಂದ ಯಡಿಯೂರಪ್ಪ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಜಡ್ಜ್ ಹೇಳಿದ್ದೇನು?
ಈ ಅರ್ಜಿ ಲಿಸ್ಟ್ ಆಗಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಇಂದು ಲಿಸ್ಟ್ ಆಗಿಲ್ಲ. ಮಧ್ಯಾಹ್ನ 2.30ಕ್ಕೆ ವಕೀಲರು ಮನವಿ ಮಾಡಿದ್ರು. ಎಫ್ಐಆರ್ಗೆ ಮಧ್ಯಂತರ ತಡೆಯಾಜ್ಞೆ ಇದೆ. ಅದಕ್ಕೆ ನೀವು ಚಾರ್ಜ್ ಶೀಟ್ ವಜಾಕ್ಕೆ ಕೇಳಲು ಆಗಲ್ಲ. FIR ಅರ್ಜಿ ರದ್ದು ಮಾಡುವ ಅರ್ಜಿ ವಾಪಸ್ ತೆಗೆದುಕೊಂಡು, ಚಾರ್ಜ್ ಶೀಟ್ ವಜಾಗೊಳಿಸಸಲು 482ಎ ಅಡಿ ಬೇರೆ ಅರ್ಜಿ ಸಲ್ಲಿಸಿ ಎಂದರು.