ಬೆಂಗಳೂರು:- 25 ಸಾವಿರ ಬಡ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮನೆಯಲ್ಲಿ ಇಲಿಗಳ ಕಾಟ ಹೆಚ್ಚಾಗಿದ್ಯಾ!?, ಹಾಗಿದ್ರೆ ಹೀಗೆ ಮಾಡಿ, ಮನೆಯಿಂದ ಓಡಿ ಹೋಗತ್ತೆ!
ಪಿಯುಸಿ ಹಂತದಲ್ಲಿ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದರು.ಈ ವರ್ಷದಿಂದಲೇ ಉಚಿವಾಗಿ ನೀಟ್ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.
ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ. ಆನ್ಲೈನ್ನಲ್ಲೂ ತರಬೇತಿ ನಡೆಯಲಿದೆ. ಇದರಿಂದ ಬಡ ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಕ್ಲಾಸ್ಗೆ ಹೋಗಿ, ಲಕ್ಷ ಲಕ್ಷ ಹಣ ಖರ್ಚು ಮಾಡುವುದು ತಪ್ಪುತ್ತದೆ. ಇದು ವೈದ್ಯಯಕೀಯ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಉತ್ತೇಜಿಸಿದಂತಾಗುತ್ತದೆ ಎಂದರು.
25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಇಲಾಖೆ ಪರೀಕ್ಷೆ ನಡೆಯಲಿದೆ. ಇಲ್ಲಿ ಪಾಸ್ ಆಗುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಅಲ್ಲದೆ, 8,9,10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.
ಅನುದಾನಿತ ಶಾಲೆಯ ಎಲ್ಲ ಹುದ್ದೆಗಳಿಗೂ ಮುಂದಿನ ಐದು ವರ್ಷಗಳಲ್ಲಿ ಖಾಯಂ ಶಿಕ್ಷಕರ ನೇಮಕಾತಿ ಆಗಲಿದೆ. ಅನುದಾನಿತ ಕನ್ನಡ ಮಾಧ್ಯಮ ಶಾಲೆ ಉಳಿಸಬೇಕಾಗಿದೆ.ಅಂಗನವಾಡಿಯಲ್ಲೇ ಎಲ್ ಕೆಜಿ ಯುಕೆಜಿ ಪ್ರಾರಂಭ ಮಾಡಲಾಗಿದೆ.ಕಲ್ಯಾಣ ಕರ್ನಾಟಕದಲ್ಲಿಯೇ 1008 ಸಾವಿರ ಎಲ್ಕೆಜಿ ಹಾಗೂ ಯುಕೆಜಿ ನರ್ಸರಿ ತೆರೆಯಲಾಗುತ್ತದೆ. ಈಗಾಗಲೇ 30 ಸಾವಿರ ಮಕ್ಕಳು ದಾಖಲಾತಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.