ಬೆಂಗಳೂರು:– ನಗರದ ಖಾಸಗಿ ಹೋಟೆಲ್ ನಲ್ಲಿ ಬೆಂಗಳೂರು ಗೋಲ್ಡ್ ಶಾಪಿಂಗ್ ಫೆಸ್ಟಿವಲ್ 3 ನೇ ಆವೃತ್ತಿಯ ಬಿಡುಗಡೆ ಕಾರ್ಯಕ್ರಮ ಜರುಗಿದೆ.
ನಗರದ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ಬೆಂಗಳೂರು ಗೋಲ್ಡ್ ಶಾಪಿಂಗ್ ಫೆಸ್ಟಿವಲ್ 3 ನೇ ಆವೃತ್ತಿಯ ಬಿಡುಗಡೆ ಕಾರ್ಯಕ್ರಮ ಜರುಗಿದ್ದು, ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ತಿನ ಶಾಸಕರಾದ ಡಾ.ಟಿ.ಎ. ಶರವಣ, ಕನ್ನಡದ ಖ್ಯಾತ ಚಲನಚಿತ್ರ ನಟಿ ರಚಿತಾ ರಾಮ್ ಅವರು ಪಾಲ್ಗೊಂಡಿದ್ದರು.
ಬೆಂಗಳೂರು ಜುವ್ಯೆಲರಿ ಅಸೋಸಿಯೇಷನ್ ಅಧ್ಯಕ್ಷರಾದ ಡಾ.ಚೇತನ್ ಕುಮಾರ್ ಮೆಹ್ತಾ, ಸುರೇಶ್ ಕುಮಾರ್ ಘಾನ, ಹಾಗೂ ಇತರ ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬಳಿಕ ಮಾತನಾಡಿದ ಶರವಣ ಅವರು, ಭಾರತೀಯರ ಪಾಲಿಗೆ ಬಂಗಾರ ಎಂದರೆ ಕೇವಲ ಹಳದಿ ಲೋಹವಲ್ಲ, ಅದು ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಘನತೆಯ ಪ್ರತೀಕ.
ಹೀಗಾಗಿ ನಗರವನ್ನು ಗೋಲ್ಡನ್ ಸಿಟಿಯಾಗಿ ಪರಿವರ್ತಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿಕೆ ನೀಡಿದ್ದಾರೆ.