ಬೆಂಗಳೂರು: ಸೆಪ್ಟೆಂಬರ್ 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭವಾಗಲಿದೆ ಹಾಗೆ ಮಿಸ್ಡ್ ಕಾಲ್ ಮೂಲಕ ಕೂಡ ಸದಸ್ಯತ್ವ ಅಭಿಯಾನ ನಡೆಯಲಿದೆ. ಈ ಅಭಿಯಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದರು.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ದೊಡ್ಡ ಮಟ್ಟದಲ್ಲಿ ಹದಗೆಟ್ಟಿದೆ. ಕಾರ್ಕಳದಲ್ಲಿ ಡ್ರಗ್ಸ್ ಕೊಟ್ಟು ಯುವತಿ ಮೇಲೆ ಅತ್ಯಾಚಾರ ನಡೆದಿದೆ. ಯುವಕರ ಕೈಗೆ ಡ್ರಗ್ಸ್, ಅಮಲು ಪದಾರ್ಥಗಳು ಹೇಗೆ ತಲುಪಿದವು?. ಹುಬ್ಬಳ್ಳಿ ಘಟನೆ ಆದಾಗ ಲವ್ ಜಿಹಾದ್ ಅಂದಾಗ ಸಿಎಂ ಆದಿಯಾಗಿ ಎಲ್ಲರೂ ಅಲ್ಲಗಳೆದಿದ್ದರು.
ಇಲ್ಲಿ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಯಾವ ಶಕ್ತಿಯ ಕೈವಾಡ ಇದೆ. ಸಂತ್ರಸ್ಥೆಗೆ ಸರ್ಕಾರ ಹೆಚ್ಚಿನ ಚಿಕಿತ್ಸೆ ಕೊಡಬೇಕು, ಕುಟುಂಬಕ್ಕೆ ಭದ್ರತೆ ಕೊಡಬೇಕು. ರಾಜ್ಯದ ಜನರಿಗೆ ಧೈರ್ಯದ ಜೊತೆಗೆ ಕ್ರಿಮಿನಲ್ಗಳಿಗೆ ಎಚ್ಚರಿಕೆಯನ್ನೂ ಸರ್ಕಾರ ಕೊಡಬೇಕಿತ್ತು. ಆದರೆ ಸಿಎಂಗೆ ಕುರ್ಚಿ ಉಳಿಸಿಕೊಳ್ಳುವ ತವಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಕಿಡಿ ಕಾರಿದರು.