ಬೆಂಗಳೂರು:- ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 80 ಫೀಟ್ ರಸ್ತೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಜರುಗಿದೆ.
Breaking News: ಅಂಗನವಾಡಿ ಕಾರ್ಯಕರ್ತೆಯ ಚಿನ್ನದ ಸರ ಕದ್ದು ಕಳ್ಳ ಎಸ್ಕೇಪ್!
27 ವರ್ಷದ ಪುಷ್ಪರಾಜ್ ಹತ್ಯೆಯಾದ ಯುವಕ ಎನ್ನಲಾಗಿದೆ. ಕುಡಿದ ಮತ್ತಿನಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಪುಷ್ಪರಾಜ್ ಟೈಲ್ಸ್ ಹಾಕುವ ಕೆಲಸ ಮಾಡಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಶುಕ್ರವಾರ ರಾತ್ರಿ ಖಾಲಿ ಜಾಗದ ಶೆಡ್ನಲ್ಲಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಈ ವೇಳೆ ಜಗಳ ನಡೆದಿದ್ದು, ಪುಷ್ಪ ರಾಜ್ ಕೊಲೆಯಾಗಿದೆ. ಘಟನೆ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇಂದು ಸಂಜೆ 4.30ಕ್ಕೆ ಮೃತದೇಹ ಇರುವುದು ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಸಂಪಿಗೆಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.