ಕೋಲಾರ: ಅವಿಭಜಿತ ಜಿಲ್ಲೆಯಾದ ಕೋಲಾರದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ನೂತನ ವಿಶ್ವವಿದ್ಯಾಲಯವಾಗಿದೆ ಈ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದೆ ವಿದ್ಯಾಲಯ ಅಭವೃದ್ದಿಗೆ ನಾನು ಸಿದ್ದ ಎಂಉ ಶಾಸಕ ಕೊತ್ತೂರು ಮಂಜುನಾಥ್ ಅವ್ರು ಹೇಳಿದ್ರು.
ಇಬ್ಬರು ಅಪ್ರಾಪ್ತ ಬಾಲಕಿಯರ ಕೊಲೆ ಪ್ರಕರಣ: ಡಿಸಿಪಿ ಸುಜೀತ್ ಹೇಳಿದ್ದೇನು!?
ಇಂದು ನಗರದ ಹೊರವಲಯದ ಮಂಗಸಂದ್ರ ಬಳಿ ಇರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 207 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ರು, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯಕ್ಕೆ ಬೇಕಾಗಿರುವ ಮೂಲಭೂತ ಸೌಕರ್ಯಗಳ ಪಟ್ಟಿಯನ್ನು ಅದಕ್ಕೆ ಬೇಕಾಗಿರುವ ಅನುದಾನವನ್ನು ಕೊಡಿಸುವ ಕೆಲಸವನ್ನು ಮಾಡಲಾಗುವುದು ಎಂದು ತಿಳಿಸಿದ್ರು.
ಅಲ್ಲದೆ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್ ಸಹ ಅವಿಭಜಿತ ಕೋಲಾರ ಜಿಲ್ಲೆಯವರಾಗಿದ್ದಾರೆ ಅವರನ್ನು ಕೇಳಿದ ತಕ್ಷಣ ಅನುದಾನ ಕೊಡಲಿಕ್ಕೆ ಸಿದ್ದರಿದ್ದಾರೆ ಎಂದರು ತಿಳಿಸಿದ್ರು.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ದೇಶದಲ್ಲಿ ಮಾದರಿಯ ವಿವಿಯಾಗಿ ಮಾಡಬೇಕು ಇದಕ್ಕೆ ಅಧಿಕಾರಿಗಳಿಂದ ಹಿಡಿದು ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಬೆಂಬಲಿಸಬೇಕ ಶಿಕ್ಷಣದಿಂದ ಮಾತ್ರವೇ ದೇಶದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ ಇದನ್ನು ವಿಧ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು ಸರ್ಕಾರ ಮತ್ತು ವಿವಿಗಳಿಂದ ಸಿಗುವ ಸೌಲಭ್ಯಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದ್ರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಬೆಂಗಳೂರು ವಿಶ್ವವಿದ್ಯಾಲಯದ ಒತ್ತಡವನ್ನು ಕಡಿಮೆ ಮಾಡಲು ಮೂರು ವಿವಿಗಳಾಗಿ ವಿಂಗಡಿಸಲಾಗಿದೆ. ಕೋಲಾರದಲ್ಲಿ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಕೇಂದ್ರ ಸ್ಥಾಪನೆಯಾಗಿದೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಬೆಂಗಳೂರು ಉತ್ತರ ವಿವಿಯಲ್ಲಿ ಕೌಶಲ್ಯ ತರಬೇತಿಗೆ ಅವಶ್ಯಕತೆ ಇರುವ ಕೋರ್ಸುಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ರು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿಯ ಹಣಕಾಸು ಅಧಿಕಾರಿ ಬಿ.ವಿ ವಸಂತಕುಮಾರ್, ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಹಾಗೂ ಪ್ರಭಾರಿ ಕುಲಸಚಿವರಾದ ಡಿ.ಕುಮುದಾ, ಡಾ ರಾಜಣ್ಣ ಮತ್ತಿತರರು ಇದ್ದರು.