ಬೆಂಗಳೂರು:- ರೇಣುಕಾ ಸ್ವಾಮಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈ ವರೆಗೆ 52 ಸ್ಥಳಗಳಲ್ಲಿ ಮಹಜರು ಮಾಡಿದ್ದಾರೆ. ಮೈಸೂರು, ಬೆಂಗಳೂರು, ಚಿತ್ರದುರ್ಗಗಳಲ್ಲಿ ಈ ಪ್ರಕರಣದ ಕೆಲವು ಪ್ರಮುಖ ಸ್ಥಳ ಮಹಜರು ನಡೆದಿವೆ. ಬೆಂಗಳೂರಿನ ಪಟ್ಟಣಗೆರೆ ಶೆಡ್, ದರ್ಶನ್, ಪವಿತ್ರಾ ಮನೆ, ಸ್ಟೂನಿ ಬ್ರೂಕ್ ಹೋಟೆಲ್, ಮೈಸೂರಿನ ಹೋಟೆಲ್, ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಮನೆ, ಆರೋಪಿಗಳ ಮನೆ ಇನ್ನಿತರೆ ಕಡೆಗಳಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.
Karnataka Rain: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ!
ಮಾತ್ರವಲ್ಲದೆ ಸುಮಾರು 150ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ಸಹ ದಾಖಲು ಮಾಡಿಕೊಂಡಿದ್ದಾರೆ. ಎಲ್ಲ ಆರೋಪಿಗಳು, ಅವರಿಗೆ ಸಂಬಂಧಿಸಿದವರು, ಅವರೊಟ್ಟಿಗೆ ಸಂಪರ್ಕದಲ್ಲಿದ್ದವರು, ಪ್ರಕರಣದ ಬಗ್ಗೆ ಗೊತ್ತಿದ್ದವರು ಇನ್ನೂ ಹಲವರ ವಿಚಾರಣೆ ಈಗಾಗಲೇ ನಡೆದಿದೆ. ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಅವನ್ನು ಸ್ಥಳ ಮಹಜರು ದಾಖಲೆ, ಸಾಕ್ಷಿಗಳೊಟ್ಟಿಗೆ ಸಮೀಕರಿಸಿದ್ದಾರೆ. ಹಾಗೂ ಪ್ರಕರಣದ ಟೈಮ್ ಲೈನ್ ಮ್ಯಾಚ್ ಮಾಡಲು ಸಹ ಬಳಸಿಕೊಂಡಿದ್ದಾರೆ.
ಅಂದಹಾಗೆ ಜೂನ್ 11 ರಂದು ಬೆಳ್ಳಂಬೆಳಿಗ್ಗೆ ನಟ ದರ್ಶನ್ ಬಂಧನವಾಗಿತ್ತು. ಮೈಸೂರಿನಲ್ಲಿ ದರ್ಶನ್ ಅನ್ನು ಪೊಲೀಸರು ಬಂಧಿಸಲು ಹೋದಾಗ ಪೊಲೀಸರ ಮುಂದೆ ದರ್ಶನ್, ‘ನನ್ನ ಜೊತೆಗಿದ್ದ ಹುಡುಗರಿಂದ ನಾನು ಹಾಳಾದೆ’ ಎಂದು ಹೇಳಿದರಂತೆ. ಅದಾದ ಬಳಿಕ ನಟಿ ಪವಿತ್ರಾ ಗೌಡ ಅವರನ್ನು ಬಂಧಿಸಲು ಯತ್ನಿಸಿ ಅವರ ಮನೆ ಹಾಗೂ ಇನ್ನೊಂದು ಸ್ಥಳಕ್ಕೆ ಪೊಲೀಸರು ಹೋಗಿದ್ದಾರೆ ಆದರೆ ಎರಡೂ ಸ್ಥಳದಲ್ಲಿ ಪವಿತ್ರಾ ಇರಲಿಲ್ಲ. ಕೊನೆಗೆ ದರ್ಶನ್ ಮೊಬೈಲ್ ನಿಂದಲೇ ಪವಿತ್ರಾಗೆ ಕರೆ ಮಾಡಿಸಿದ ಪೊಲೀಸರು ಪವಿತ್ರಾರನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆಸಿಕೊಂಡು ಬಂಧಿಸಿದ್ದಾರೆ.
ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಆರಂಭದ ಒಂದೆರಡು ವಾರ ಬಹಳ ಸಮಸ್ಯೆ ಎದುರಿಸಿದ್ದರು. ಅಲ್ಲಿನ ಊಟ ಅವರಿಗೆ ಹಿಡಿಸಿರಲಿಲ್ಲ. ಆರೋಗ್ಯ ಸಮಸ್ಯೆ ಉಲ್ಬಣವಾಗಿತ್ತು, ಜ್ವರ, ಭೇದಿ, ನಿದ್ರಾಹೀನತೆ ಕಾಡಿತ್ತು. ಆದರೆ ಇತ್ತೀಚೆಗೆ ನಟ ದರ್ಶನ್ ಜೈಲು ಪರಿಸರಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ. ಪ್ರತಿ ದಿನ ನಟ ದರ್ಶನ್, ಇತರೆ ಕೈದಿಗಳೊಟ್ಟಿಗೆ ವಾಲಿಬಾಲ್ ಆಟ ಆಡುತ್ತಾ ಸಮಯ ಕಳೆಯುತ್ತಿದ್ದಾರೆ.