ಬೆಂಗಳೂರು: ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಹಾಗೂ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಸ್ತರಿಸಲಾಗಿದೆ. ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಮೊದಲು ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಚೇರಿಯ ವ್ಯಾಪ್ತಿಯ ಉಪನೋಂದಣಿ ಕಚೇರಿಗಳಲ್ಲಿ ಜಾರಿಗೆ ತರಲಾಗಿತ್ತು.ಪ್ರಾಯೋಗಿಕವಾಗಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ ವರ್ಷ ಮಾ.14 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಿದ್ದು, ಜನರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ.
ಸೆಪ್ಟೆಂಬರ್ ತಿಂಗಳಲ್ಲಿ ತಲಾ 4 ಜಿಲ್ಲೆಗಳಲ್ಲಿ ಈ ವ್ಯವಸ್ಥೆಯನ್ನು ಪರಿಚಯಿಸಿ. ನಂತರದ ತಿಂಗಳಲ್ಲಿ ಈ ಸಂಖ್ಯೆಯನ್ನು 8 ಕ್ಕೆ ಏರಿಸಿ. ಈ ವರ್ಷಾಂತ್ಯದೊಳಗೆ ಎಲ್ಲಾ ಜಿಲ್ಲೆಗಳಲ್ಲೂ ಎನಿವೇರ್ ರಿಜಿಸ್ಟ್ರೇಷನ್ ಲಭ್ಯವಾಗುವಂತೆ ನೋಡಿಕೊಳ್ಳುವಂತೆ ನೋಂದಣಿ ಹಾಗೂ ಮುದ್ರಾಂಕ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪಡಿತರ ಚೀಟಿದಾರರ ಗಮನಕ್ಕೆ: ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘BPL’ ಕಾರ್ಡ್.!
ರಾಜ್ಯದಲ್ಲಿ35 ಜಿಲ್ಲಾನೋಂದಣಿ ಕಚೇರಿಗಳಿದ್ದು, ಸಾರ್ವಜನಿಕರು ಆಯಾ ಜಿಲ್ಲಾವ್ಯಾಪ್ತಿಯಲ್ಲಿಬಯಸಿದ ದಿನ, ಸಮಯದಲ್ಲಿಸ್ಥಿರಾಸ್ತಿ ನೋಂದಾಯಿಸಬಹುದು. ‘ಎನಿವೇರ್ ನೋಂದಣಿ’ ವ್ಯವಸ್ಥೆಯ ಪ್ರಯೋಗ ದಶಕಗಳ ಹಿಂದಿನದ್ದು. ಜಿಲ್ಲಾನೋಂದಣಿ ಕಚೇರಿ ವ್ಯಾಪ್ತಿಯ ಯಾವುದೇ ಉಪನೋಂದಣಿ ಕಚೇರಿಯಲ್ಲಿನೋಂದಣಿ ಪ್ರಕ್ರಿಯೆ ನಡೆಸುವ ವ್ಯವಸ್ಥೆ ಬೆಂಗಳೂರಿನಲ್ಲಿ2011ರಲ್ಲೇ ಜಾರಿಯಾಗಿತ್ತು. ಬೆಂಗಳೂರು ನಗರ ಜಿಲ್ಲೆವ್ಯಾಪ್ತಿಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯ ಯಾವುದಾದರೂ ಕಚೇರಿಯಲ್ಲಿನೋಂದಣಿಗೆ ಅವಕಾಶವಿದ್ದು, ಯಶಸ್ವಿಯಾಗಿ ಬಳಕೆಯಾಗುತ್ತಿದೆ.
ಬೆಂಗಳೂರು ನಗರ ಜಿಲ್ಲೆಗೆ ಹೋಲಿಸಿದರೆ ಇತರೆ ಜಿಲ್ಲೆಗಳಲ್ಲಿನೋಂದಣಿಯಾಗುವ ದಸ್ತಾವೇಜಿನ ಸ್ವರೂಪ, ನೋಂದಣಿ ಸಂಖ್ಯೆ ಪ್ರಮಾಣ, ಸ್ವತ್ತಿನ ಸ್ವರೂಪ, ಸ್ವತ್ತಿನ ಮೌಲ್ಯ ಹಾಗೂ ಇತರೆ ಅಂಶಗಳಲ್ಲಿವಿಭಿನ್ನತೆ ಇರುವ ಹಿನ್ನೆಲೆಯಲ್ಲಿಹೆಚ್ಚು ಉಪನೋಂದಣಿ ಕಚೇರಿ ಹೊಂದಿರುವ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಇಲ್ಲಿಎರಡು ತಿಂಗಳ ಕಾಲ ಪ್ರಾಯೋಗಿಕವಾಗಿ ‘ ಎನಿವೇರ್ ನೋಂದಣಿ ‘ ವ್ಯವಸ್ಥೆ ಜಾರಿಗೊಳಿಸಲಾಗಿತ್ತು.
ಈಗ ಯಶಸ್ವಿಯಾಗಿ ಬಳಕೆಯಾಗುತ್ತಿರುವುದು ಕಂಡುಬಂದಿದೆ. ನೋಂದಣಿ ವಿಚಾರದಲ್ಲಿಯಾವುದೇ ಲೋಪದೋಷಗಳು, ತಾಂತ್ರಿಕ ಅಡಚಣೆಗಳು ಕಂಡುಬಂದಿಲ್ಲ. ಅಲ್ಲದೇ ತೃತೀಯ ಹಂತದ ಮೌಲ್ಯಮಾಪನ ನಡೆಸಿ ರಾಜ್ಯದ ಎಲ್ಲನೋಂದಣಿ ಜಿಲ್ಲೆ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ಹೇಳಿವೆ.
ಏನಿದು ಏನಿವೇರ್ ರಿಜಿಸ್ಟ್ರೇಷನ್?*
- ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜನ ಸಂದಣಿ ಇಲ್ಲದ ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ತಮ್ಮ ಆಸ್ತಿ ದಸ್ತಾವೇಜನ್ನು ನೋಂದಾಯಿಸಿಕೊಳ್ಳಲು “ಎನಿವೇರ್ ರಿಜಿಸ್ಟ್ರೇಷನ್” ವ್ಯವಸ್ಥೆಯ ಅಡಿಯಲ್ಲಿ ಸರ್ಕಾರ/ಕಂದಾಯ ಇಲಾಖೆ ಅವಕಾಶ ಮಾಡಿಕೊಟ್ಟಿದೆ.
- ದಸ್ತಾವೇಜುಗಳ ನೋಂದಣಿಗಳಲ್ಲಿನ ವಿಳಂಬ ತಡೆಗಟ್ಟಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸುವ, ಸಬ್ ರಿಜಿಸ್ಟ್ರಾರ್ ಕಚೇರಿ ಎದುರು ಜನರಿಗೆ ಕಾಯುವ ಶೋಷಣೆಯಿಂದ ಮುಕ್ತಿ ನೀಡುವ ಹಾಗೂ ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಎನಿವೇರ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಾರಿಗೆ ತರಲಾಯ್ತು.
- ಈ ಯೋಜನೆಯ ಮೂಲಕ ಆಸ್ತಿ ನೋಂದಣಿ ಸಮಯದಲ್ಲಿ ಜನಸಾಮಾನ್ಯರು ಬೆಂಗಳೂರು ನಗರದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಲು ನೋಂದಣಿ ಕಾಯ್ದೆ-1908ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಅನುವು ಮಾಡಿಕೊಡಲಾಗಿತ್ತು.
- ಎನಿವೇರ್ ನೋಂದಣಿ ವ್ಯವಸ್ಥೆಯು ಬೆಂಗಳೂರು ನಗರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಸಾಮಾನ್ಯರಿಗೆ ನೋಂದಣಿ ವಿಚಾರದಲ್ಲಿ ತ್ವರಿತ ಸೇವೆ ನೀಡಲು ಈ ಯೋಜನೆ ಸಹಕಾರಿಯಾಗಿದೆ. ಜನರೂ ಇದರ ಉಪಯೋಗವನ್ನು ಬಳಸಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಈ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟಿದೆ.