ಬೆಂಗಳೂರು:- ಕಾರ್ಕಳ ಅತ್ಯಾಚಾರ ಕೇಸ್ ಗೆ ಸಂಬಧಪಟ್ಟಂತೆ ಇದೊಂದು ಹೇಯಕೃತ್ಯ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಕಾರ್ಕಳ ಯುವತಿ ರೇಪ್ & ಮರ್ಡರ್ ಕೇಸ್: ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್ ನೆಗೆಟಿವ್!
ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಅಲ್ಲದೇ ಸಂತ್ರಸ್ತೆಗೆ ಜಿಲ್ಲಾಡಳಿತ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಮಾಹಿತಿ ಬಂದ ತಕ್ಷಣ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಪೊಲೀಸರಿಗೆ ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಡ ಘಟನೆ ಸಂಬಂಧಿಸಿದಂತೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಯಾರೇ ಆಗಲಿ, ಯಾವುದೇ ಧರ್ಮದವರಾಗಲಿ ತಪ್ಪು ಮಾಡಿದರೆ, ತಕ್ಕ ಶಿಕ್ಷೆ ನೀಡುವುದಕ್ಕೆ ನಮ್ಮ ಪೊಲೀಸರಿಗೆ ಹಿಂಜರಿಕೆಯಿಲ್ಲ. ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ. ಇನ್ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರಕಳಿಸದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದರು.