ಚಿಕ್ಕೋಡಿ: ‘ಗೃಹಲಕ್ಷ್ಮಿ’ ಯೋಜನೆ ಹಣದಿಂದ ಇಡೀ ಊರಿಗೆ ಅಜ್ಜಿಯೊಬ್ಬರು ಹೋಳಿಗೆ ಊಟ ಹಾಕಿಸಿದ್ದಾರೆ. ಈ ಅಜ್ಜಿಯ ಕಾರ್ಯದ ಬಗ್ಗೆ ಖುದ್ದು ಮಾಹಿತಿ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಂತಸ ವ್ಯಕ್ತಪಡಿಸಿ ಗೃಹಲಕ್ಷ್ಮಿ ಜಾರಿಗೆ ತಂದಿದ್ದು ಸಾರ್ಥಕವಾಗುತ್ತಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿರುವ ಅಜ್ಜಿ ಅಕ್ಕಾತಾಯಿ ಲಂಗೂಟಿ ಅವರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ದೂರವಾಣಿ ಮೂಲಕ ಮಾತನಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ. ಅಜ್ಜಿಯೊಂದಿಗೆ ಕೆಲಹೊತ್ತು ಸಚಿವರು ಗೌರವ ಮತ್ತು ಸಂಯಮದಿಂದ, ಬೆಳಗಾವಿ ಶೈಲಿಯಲ್ಲೇ ಮಾತನಾಡಿದ್ದಾರೆ.
ಇನ್ನು ಊರಿಗೆ ಹೋಳಿಗೆ ಊಟ ಹಾಕಿಸಿದೆ. ನಿನ್ನ ಮಗಳಿಗೆ ಕರಿಲಿಲ್ಲ ಎಂದು ಹೇಳುತ್ತಾ ಹೆಬ್ಬಾಳ್ಕರ್ ಖುಷಿ ವ್ಯಕ್ತಪಡಿಸಿದರು. ‘ ಜೊತೆಗೆ ನೀವು ನಮ್ಮನೆ ಊಟಕ್ಕೆ ಬನ್ನಿ ಎಂದು ವೃದ್ಧೆಯನ್ನು ಆಹ್ವಾನಿಸಿದರು. ಇದೇ ವೇಳೆ ನಿನಗೆ ಒಂದು ಸೀರೆ ಕೊಟ್ಟು ಕಳ್ಸಿದ್ದೇನೆ. ನೀನು ಊರಿಗೆ ಊಟ ಹಾಕಿದಿ, ನಿನ್ನ ಮಗಳು ನೀನಗೆ ರೇಷ್ಮೆ ಸೀರೆ ಉಡಿಸುತ್ತಾಳೆ. ಗೃಹಲಕ್ಷ್ಮಿ ಯೋಜನೆಯಿಂದ ಇಡೀ ರಾಜ್ಯದ ಜನರಿಗೆ ಒಳ್ಳೆಯದಾಗುತ್ತದೆ ಎಂದರು.