ವಿಜಯಪುರ: ಮೂಡಾ ಕೇಸಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ದ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಹಾಗೂ ಮುಖ್ಯಮಂತ್ರಿ ಸಿದ್ರಾಮಯ್ಯನವರ ಪರ ಬೆಂಬಲಾರ್ಥವಾಗಿ ಇದೇ ದಿನಾಂಕ 29 ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘಟನೆಯ ಮುಖಂಡರಾದ ಡಿ ಜಿ ಸಾಗರ ಹೇಳಿದರು. ಈ ಕುರಿತು ವಿಜಯಪುರ ನಗರದಲ್ಲಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ,
ಸುಖಾ ಸುಮ್ಮನೇ ಸಿದ್ದರಾಮಯ್ಯ ನವರ ಮೇಲೆ ಗೂಬೆ ಕೂಡಿಸುವ ಕೆಲಸವನ್ನು ಬಿಜೆಪಿ ಹಾಗೂ ಜೆಡಿಎಸ್ ನವರು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಮೂಲಕ ರಾಜ್ಯಪಾಲರ ಮೇಲೆ ಒತ್ತಡ ಹಾಕಿ ಸಿಎಂ ವಿರುದ್ದ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಡಿಸಿದ್ದಾರೆ ಇದೆಲ್ಲವನ್ನು ಖಂಡಿಸಿ ಬೃಹತ್ ಹೋರಾಟ ಮಾಡಲಾಗುವದು ಎಂದರು. ಅಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಡಿಎಸ್ ಎಸ್ ರಾಜ್ಯ ಸಂಚಾಲಕ ಡಿ ಜಿ ಸಾಗರ ಹೇಳಿದರು.