ಹುಬ್ಬಳ್ಳಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರಾಜ್ಯದಲ್ಲಿ ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಬೆಂಬಲ ಬೆಲೆ ನೀಡಿದ ಪ್ರಯುಕ್ತ ರೈತರ ಸನ್ಮಾನ ಸ್ವೀಕಾರ ಮಾಡಿ ಅವರು ಮಾತನಾಡಿದರು
‘ಕೇಂದ್ರ ಸರ್ಕಾರದಿಂದ ಹೆಸರುಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್ಗೆ 8682 ರೂ ( MSP) 3 2 ಎಂದು ತಿಳಿಸಿದ್ದಾರೆ.
ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಮೌಲ್ಯ ದೊರೆಯದೇ ತೊಂದರೆ ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ನೆರವಿಗಾಗಿ ಎಂಎಸ್ ಪಿ ಅಡಿ ಹೆಸರು ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು ರಾಜ್ಯದ ರೈತರ ಹೆಸರುಕಾಳು ಬೆಳೆಯನ್ನು ಬೆಲೆ ಬೆಂಬಲ ಯೋಜನೆ ಅಡಿ ಅನುಮತಿ ನೀಡಿದ್ದು 2215 ಹೆಸರುಕಾಳು ಬೆಳೆಯನ್ನು 8682 ಪ್ರತಿ ಕ್ವಿಂಟಲ್ ರೂಪಾಯಿಯಂತೆ ಖರೀದಿ ಮಾಡಲಾಗುವುದು ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಇನ್ನು ರೈತ ನಾಯಕರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಹೂ ಹಾರ ಹಾಕಿ ಸನ್ಮಾನ ಮಾಡಿದರು.