ಕನ್ನಡಿಗನ ಕೆ ಎಲ್ ರಾಹುಲ್ ಅವರು RCB ಗೆ ಬರೋದು ಡೌನ್ ಎನ್ನಲಾಗಿದ್ದು, ಕನ್ನಡಿಗನ ನಡೆ ಭಾರೀ ಕುತೂಹಲ ಮೂಡಿಸಿದೆ.
ಕೊಲ್ಕತ್ತಾದಲ್ಲಿರುವ ತಮ್ಮ ಕಚೇರಿಗೆ ರಾಹುಲ್ ಅವರನ್ನು ಕರೆಸಿಕೊಂಡು LSG ತಂಡದ ಮಾಲೀಕರು ಮಾತುಕತೆ ನಡೆಸಿದ್ದಾರೆ. ಮಾತುಕತೆಯ ಬೆನ್ನಲ್ಲೇ ಕೆಎಲ್ ರಾಹುಲ್ ಅವರ ಮುಂದಿನ ನಡೆಯೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಏಕೆಂದರೆ ಸಂಜೀವ್ ಗೊಯೆಂಕಾ ರಾಹುಲ್ ಅವರನ್ನು ಕರೆಸಿಕೊಂಡು ಮಾತನಾಡಬೇಕಿದ್ದರೆ, ಇಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟ. ಅದರಲ್ಲೂ ಕೆಎಲ್ಆರ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲು ಮುಂದಾಗಿದ್ದು, ಇದೇ ಕಾರಣದಿಂದಾಗಿ ಅವರ ಮನವೊಲಿಸಲು ಇದೀಗ LSG ಮಾಲೀಕರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಭೇಟಿಯ ವೇಳೆ ತಮ್ಮನ್ನು ತಂಡದಲ್ಲೇ ಉಳಿಸಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬಯಸುತ್ತಿರುವುದಾಗಿ ಸಂಜೀವ್ ಗೊಯೆಂಕಾ ತಿಳಿಸಿದ್ದಾರೆ. ಇದಾಗ್ಯೂ ಕೆಎಲ್ ರಾಹುಲ್ ಅಂತಿಮ ನಿರ್ಧಾರವನ್ನು ತಿಳಿಸಿಲ್ಲ. ಹೀಗಾಗಿ ಕೆಎಲ್ಆರ್ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲೇ ಉಳಿಯಲಿದ್ದಾರಾ ಅಥವಾ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ಇನ್ನಷ್ಟೇ ನಿರ್ಧಾರವಾಗಲಿದೆ.
ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದರೆ ರಾಹುಲ್ ಖರೀದಿಗೆ ಕೆಲ ಫ್ರಾಂಚೈಸಿಗಳು ಮುಂದಾಗಲಿದೆ. ಅದರಲ್ಲೂ ಹೊಸ ನಾಯಕ ಹಾಗೂ ವಿಕೆಟ್ ಕೀಪರ್ನ ಹುಡುಕಾಟದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೆಎಲ್ ರಾಹುಲ್ ಖರೀದಿಗೆ ಹೆಚ್ಚಿನ ಆಸಕ್ತಿ ಹೊಂದಿದೆ.
ಹೀಗಾಗಿ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಆರ್ಸಿಬಿ ಖರೀದಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರನ್ನು ಭೇಟಿಯಾಗಿರುವ ಕಾರಣ ಕೆಎಲ್ ರಾಹುಲ್ ಅವರ ಮುಂದಿನ ನಡೆಯೇನು ಎಂಬುದನ್ನು ಹಲವು ಫ್ರಾಂಚೈಸಿಗಳು ಎದುರು ನೋಡುತ್ತಿದೆ