ದಾಸನ ದರ್ಬಾರ್ಗೆ ಬ್ರೇಕ್ ಬಿದ್ದಿದ್ದು, ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಮಾಡಲಾಗಿದೆ.
ಸ್ಟೀಲ್ ಮಿನಿಸ್ಟರ್ ಕುಮಾರಸ್ವಾಮಿ ಸತ್ಯಕ್ಕೆ ಹೆಸರುವಾಸಿ: ವ್ಯಂಗ್ಯವಾಡಿದ ಡಿಕೆ ಶಿವಕುಮಾರ್!
ರಾಜಾತಿಥ್ಯದ ಫೋಟೋ ವೈರಲ್ ಆದ ಹಿನ್ನೆಲೆ ಎಫ್ಐಆರ್ ದಾಖಲಾಗಿ ತನಿಖೆ ಕೂಡ ನಡೆಸಲಾಗ್ತಿದೆ. ಇದೇ ವೇಳೆ ದರ್ಶನ್ನನ್ನು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿನ್ನೆ ರಾತ್ರಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಸೀಕ್ರೆಟ್ ಮೀಟಿಂಗ್ ನಡೆಸಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಚೀಫ್ ಸೂಪರಿಡೆಂಟ್ ರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಇದೀಗ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಪವನ್ , ರಾಘವೇಂದ್ರ ನಂದೀಶ್ ನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಜಗದೀಶ್ ಅವರನ್ನು ಶಿವಮೊಗ್ಗಕ್ಕೆ ಹಾಗೂ ಧನರಾಜ್ನನ್ನು ಧಾರವಾಡ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆಗಿರುವ ನಟಿ ಪವಿತ್ರಾ ಗೌಡ ಅವರು ಪರಪ್ಷನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ಅನುಕುಮಾರ್ ಹಾಗೂ ದೀಪಕ್ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ದರ್ಶನ್ ಅವರನ್ನು ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದ್ದು, ಸದ್ಯ ದರ್ಶನ್ ಕರೆದೊಯ್ಯುವ ಸಮಯದ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.
ಜೈಲಿನಲ್ಲಿ ವಿಶೇಷ ಆತಿಥ್ಯಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರಿಂದ ಮೂರು ತಂಡಗಳ ರಚನೆ ಆಗಿದೆ. ಬೇಗೂರು ಇನ್ಸ್ಪೆಕ್ಟರ್ ಕೃಷ್ಣ ಕುಮಾರ್ ಅವರಿಂದ ಮೊದಲನೇ ಪ್ರಕರಣದ ತನಿಖೆ ನಡೆಯಲಿದೆ.