ಇಂದು ರಾಷ್ಟ್ರವ್ಯಾಪಿ ಬ್ಯಾಂಕ್ ಸೇವೆಗಳು ಬಂದ್ ಮಾಡಲಾಗಿದೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಸೇವೆಗಳು ಮತ್ತು ವಹಿವಾಟುಗಳು ಮೇಲೆ ಪರಿಣಾಮ ಉಂಟು ಮಾಡಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ಎಕ್ಸ್ನಲ್ಲಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ಅವರು ಪ್ರತಿಕಾ ಪ್ರಕಟನೆಯನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಮುಷ್ಕರದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು. ಸರ್ಕಾರಕ್ಕೆ ತನ್ನ ಎಲ್ಲ ಬೇಡಿಕೆಗಳನ್ನು ಪ್ರಸ್ತಾಪಿಸಿದ್ದೇವೆ ಎಂದು ತಾವು ಹಂಚಿಕೊಂಡಿರುವ ಪ್ರತಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಆ ಕಾರಣಕ್ಕೆ ಇಂದು (ಆಗಸ್ಟ್ 28) ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಸೇವೆಗಳು ಮತ್ತು ವಹಿವಾಟುಗಳು ಮೇಲೆ ಪರಿಣಾಮ ಉಂಟು ಮಾಡಲಿದೆ. ಬ್ಯಾಂಕ್ ಸಿಬ್ಬಂದಿ ಸಂಘದ ಹದಿಮೂರು ಪದಾಧಿಕಾರಿಗಳನ್ನು ಚಾರ್ಜ್ ಶೀಟ್ ಮಾಡಿರುವ ಬ್ಯಾಂಕ್ ಆಫ್ ಇಂಡಿಯಾದ ಕ್ರಮವನ್ನು ವಿರೋಧಿಸಿ ಇಂದು ಎಐಬಿಇಎ ರಾಷ್ಟ್ರವ್ಯಾಪಿ ಮುಷ್ಕರವನ್ನು ಕೈಗೊಳ್ಳಲಾಗಿದೆ.