ಶಿಡ್ಲಘಟ್ಟ: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡಿವೆ, ಅಪವಿತ್ರ ಮೈತ್ರಿ ಗೆ ಯಾರೂ ಬೆಲೆ ಕೊಡುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ರಾಜ್ಯಪಾಲರು ಪ್ರಸಿಕ್ಯೂಷನ್ ಗೆ ಅನುಮತಿಸಿರುವ ಕ್ರಮವನ್ನು ಖಂಡಿಸಿ,
ರಾಜ್ಯಾದ್ಯಂತ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ( ದಲಿತ ಹಿಂದುಳಿದ ಅಲೆಮಾರಿ ಆದಿವಾಸಿ ಅಲ್ಪಸಂಖ್ಯಾತ ಮತ್ತು ಜನಪರ ಸಂಘಟನೆಗಳು ) ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ (ರಿ) ವು, ಸಿಎಂ ಸಿದ್ದರಾಮಯ್ಯ ಅವರ ತೇಜೋವದೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರ ಗೊಳಿಸುತ್ತಿರುವ ಬಿಜೆಪಿ – ಜೆಡಿಎಸ್ ಕುತಂತ್ರಗಳನ್ನು ವಿರೋಧಿಸಿ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಚಲೋ ಎಂಬ ಘೋಷ ವಾಕ್ಯದೊಂದಿಗೆ ರಾಜಭವನ ಮುತ್ತಿಗೆಯ ಸಲುವಾಗಿ ಹೊರಡುವ ಸಮಯದಲ್ಲಿ ಅವರು ಮಾತನಾಡಿದರು.
ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಸುಭದ್ರ ಸರ್ಕಾರವನ್ನು ಅಸ್ಥರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯಪಾಲರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದು, ಅವರ ಘನತೆಗೆ ತಕ್ಕಂತೆ ವರ್ತಿಸುತ್ತಿಲ್ಲ, ಈ ಕೂಡಲೇ ಅವರು ಹೊರಡಿಸಿರುವ ಪ್ರಾಸಿಕ್ಯೂಷನ್ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು, ಮುಖಂಡರು ಹಾಗು ಇನ್ನಿತರರು ಹಾಜರಿದ್ದರು.