ವಿಜಯಪುರ :-ತಾಲೂಕಿನ ಜಂಬಗಿ ಗ್ರಾಮದ ಕೆರೂರು ವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣಕ್ಕೆ ರಾಷ್ಟ್ರಪಕ್ಷಿ ನವಿಲು ಆಗಮಿಸಿ ವಿದ್ಯಾರ್ಥಿಗಳ ಜೊತೆ ಬಿಸಿಯೂಟ ಸವಿದಿದೆ.
ಹಣ್ಣುಗಳನ್ನು ನಿತ್ಯ ತಿನ್ನುತ್ತಿದ್ದೀರಾ!?, ಹಾಗಿದ್ರೆ ಇದು ನೆನಪಿರಲಿ, ಪ್ರಾಣಕ್ಕೆ ಕುತ್ತು ಬರಬಹುದು ಎಚ್ಚರ!
ಶಾಲಾ ಆವರಣದಲ್ಲಿ ಓಡಾಡಿ ತರಗತಿಗಳಿ ಬಳಿ ಸುಳಿದಾಡಿತ್ತು. ಬಳಿಕ ಮಧ್ಯಾಹ್ನ ಅಕ್ಷರ ದಾಸೋಹ ಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗಿರುವ ಬಿಸಿ ಊಟವನ್ನು ಸವಿದು ಖುಷಿ ಪಟ್ಟಿತು. ಮಕ್ಕಳೊಂದಿಗೆ ಕೂಡಿ ಬಿಸಿಯೂಟ ಸವಿದ ಮಯೂರಿ, ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಶಾಲಾ ಆವರಣದಲ್ಲಿ ಪಂಕ್ತಿ ಸಾಲಿನಲ್ಲಿ ಕುಳಿತು ಮಕ್ಕಳ ಜೊತೆ ಬಿಸಿಯೂಟ ಸೇವಿಸುವ ಮುನ್ನ ಪ್ರಾರ್ಥನೆ ಸಲ್ಲಿಸುವಾಗ ಮಕ್ಕಳ ಬಳಿಯೇ ಓಡಾಡಿತ್ತು. ಬಳಿಕ ವಿದ್ಯಾರ್ಥಿಗಳ ತಟ್ಟೆಯತ್ತ ಸಾಗಿತ್ತು. ಆಗ ಶಿಕ್ಷಕರ ಸಲಹೆ ಮೇರೆಗೆ ಓರ್ವ ವಿಧ್ಯಾರ್ಥಿನಿ ತನ್ನ ತಟ್ಟೆಯನ್ನು ನವಿಲಿಗೆ ಕೊಟ್ಟು ತಾನು ಬೇರೊಂದು ತಟ್ಟೆ ಪಡೆದು ಊಟ ಮಾಡಿದ್ದಾಳೆ.
ಸಧ್ಯ ಈ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.