ಹುಬ್ಬಳ್ಳಿ : ಗಡಿಪಾರಾದ ರೌಡಿಶೀಟರ್ಗಳು ಅನಧಿಕೃತವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪ್ರವೇಶಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸುವ್ಯಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಎಚ್ಚರಿಕೆ ನೀಡಿದ್ದಾರೆ.
ವಾಹನ ಸವಾರರೇ ನಾಳೆ ರಸ್ತೆಗೆ ಇಳಿಯೋ ಮುನ್ನ ಈ ಸ್ಟೋರಿ ನೋಡಿ: ಬೆಂಗಳೂರಿನ ಪ್ರಮುಖ ರಸ್ತೆಗಳು ಬಂದ್!
ನಗರದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ರೌಡಿಗಳ ನಿಗೃಹಕ್ಕೆ ಮತ್ತು ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈಗಾಗಲೇ ಕೆಲ ರೌಡಿಶೀಟರ್ಗಳನ್ನು ಗಡಿಪಾರು ಮಾಡಿದ್ದು, ಇನ್ನೂ ಕೆಲ ರೌಡಿಶೀಟರ್ಗಳ ಗಡಿಪಾರಿಗೂ ಚಿಂತನೆ ನಡೆದಿದೆ. ಮಾದಕ ವಸ್ತುಗಳ ಮತ್ತು ಪೆಡ್ಲರ್ಗಳ ನಿಗ್ರಹಕ್ಕೆ ಇಲಾಖೆ ಬದ್ಧವಾಗಿದೆ ಎಂದರು.
ಗಣೇಶ ಚತುರ್ಥಿ ಹಾಗೂ ಈದ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಬೆಳಗಾವಿ, ಹುಬ್ಬಳ್ಳಿ ಹಾಗೂ ಶಿವಮೊಗ್ಗದಲ್ಲಿ ಸಭೆ ನಡೆಸಲಾಗುತ್ತಿದೆ. ಈದ್ಗಾ ಮೈದಾನದಲ್ಲಿ ಗಣೇಶ ವಿಗೃಹ ಪ್ರತಿಷ್ಠಾಪನೆಯ ವಿಚಾರ ಮಹಾನಗರ ಪಾಲಿಕೆಯ ಆಯುಕ್ತರ ವಿವೇಚನೆಗೆ ಬಿಟ್ಟಿದ್ದು.
ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನೋಡಿಕೊಳ್ಳುವುದಷ್ಟೇ ನಮ್ಮ ಜವಾಬ್ದಾರಿ. ಈದ್ಗಾ ಮೈದಾನದ ಬಗ್ಗೆ ಪಾಲಿಕೆಯ ಆಯುಕ್ತರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.
ಫೈ ಓವರ್ ವಿಚಾರವಾಗಿ ಈದ್ದಾ ಮೈದಾನದ ಗೇಟು ತೆರವು ವಿಚಾರ ಪಾಲಿಕೆ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.