ರಾಯಚೂರು: ಕೃಷ್ಣಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಆಗಿರುವ ಹಿನ್ನೆಲೆ ಬಸವಸಾಗರ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ. ರಾಯಚೂರಿನ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.75 ಲಕ್ಷ ಕ್ಯುಸೆಕ್ ಒಳಹರಿವಿದೆ. ಈ ಹಿನ್ನೆಲೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.
Shrama Shakti Scheme: ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ 50 ಸಾವಿರ ರೂ. ಸಾಲ! 25 ಸಾವಿರ ಫ್ರೀ
ಶೀಲಹಳ್ಳಿ ಸೇತುವೆ ಮುಳುಗಡೆಯಿಂದ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಶೀಲಹಳ್ಳಿ, ಹಂಚಿನಾಳ, ಯರಗೋಡಿ ಸಂಪರ್ಕ ಮಾರ್ಗ ಸಂಪೂರ್ಣ ಬಂದ್ ಆಗಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.