ಬೆಂಗಳೂರು:- ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು 16 ನೇ ಹಣಕಾಸು ಆಯೋಗದ ಸಭೆ ಜರುಗಿದೆ.
ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇಂದು ಆಯೋಜನೆ ಮಾಡಲಾಗಿದ್ದ ಸಭೆಯಲ್ಲಿ ಪರಿಷತ್ ಶಾಸಕ ಟಿಎ ಶರವಣ ಅವರು ಭಾಗಿಯಾಗಿದ್ದರು.
ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡುವ 16ನೇ ಹಣಕಾಸು ಆಯೋಗ ಕಳೆದ 2 ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು ಹಲವು ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಸಚಿವರು, ಯೋಜನಾ ಆಯೋಗ, ಹಣಕಾಸು ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ಮಹತ್ವದ ಸಭೆ ನಡೆದಿದ್ದು, ಪರಿಷತ್ ಸದಸ್ಯ ಟಿಎ ಶರವಣ ಅವರು ಕೂಡ ಭಾಗಿಯಾಗಿ ಚರ್ಚೆ ನಡೆಸಿದರು.
ಈ ವೇಳೆ ಟಿ. ಎ. ಶರವಣ ಸೇರಿದಂತೆ ಎಂ.ಎಲ್.ಸಿ.ತಿಪ್ಪೇಸ್ವಾಮಿ, ಎಂ.ಎಲ್.ಸಿ. ಜವರೇಗೌಡರು ಮತ್ತು ಮಾಜಿ ಸಚಿವರಾದ ನಾಡಗೌಡ ಅವರು ರಾಜ್ಯದ ಮನವಿಯನ್ನು ಆಯೋಗದ ಅಧ್ಯಕ್ಷರಾದ ಡಾ. ಅರವಿಂದ ಪನಗಾರಿಯ ಅವರಿಗೆ ಹಸ್ತಾಂತರಿಸಿದರು.