ಬಳ್ಳಾರಿ:- ಬೆಂಗಳೂರಿನಿಂದ ಬಳ್ಳಾರಿಗೆ ಕರೆತರುವಾಗ ದರ್ಶನ್ ಕೈಗೆ ಕೋಳ ತೊಡಿಸಲಾಗಿತ್ತಾ ಎಂಬ ವಿಚಾರವಾಗಿ ಎಸ್ಪಿ ಶೋಭಾರಾಣಿ ಪ್ರತಿಕ್ರಿಯೆ ನೀಡಿದ್ದಾರೆ.
ಬಾಗಲಕೋಟೆ: ನಗರಸಭೆ ಚುನಾವಣೆಯಲ್ಲಿ ಮಹಿಳೆಯರ ಮೇಲುಗೈ: ಪಟಾಕಿ ಸಿಡಿಸಿ ಸಂಭ್ರಮ!
ದರ್ಶನ್ ಕೈಯಲ್ಲಿ ಕೋಳ ಇರಲಿಲ್ಲ. ಕೈ ನೋವಾಗಿದ್ದರಿಂದ ಬಟ್ಟೆ ಕಟ್ಟಿದ್ದರು ಎಂದು ಸ್ಪಷ್ಟಪಡಿಸಿದರು. ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ ಬಳಿಕ ಎಸ್ಪಿ ಶೋಭಾರಾಣಿ ಅವರು ಮೊದಲ ಬಾರಿಗೆ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು,
ದರ್ಶನ್ ಕೈಯಲ್ಲಿ ಕೋಳ ಇರಲಿಲ್ಲ. ಆರೋಪಿ ದರ್ಶನ್ ಕೈ ನೋವಾಗಿದ್ದರಿಂದ ಬಟ್ಟೆ ಕಟ್ಟಿದ್ದರು. ದರ್ಶನ್ ಅನಾರೋಗ್ಯ ವದಂತಿ ಸುಳ್ಳು, ಯಾವುದೇ ಸಮಸ್ಯೆ ಇಲ್ಲ. ವದಂತಿಗಳಿಗೆ ಕಿವಿಕೊಡಬೇಡಿ. ದರ್ಶನ್ ಜೈಲಿಗೆ ಬಂದಾಗ ಕಡಗ, ದಾರ, ಚೇನ್ ಗಳನ್ನ ಬಿಚ್ಚಿಸಲಾಗಿದೆ. ಇನ್ನು ದರ್ಶನ್ ಹಾಕಿಕೊಂಡಿದ್ದ ಕೂಲಿಂಗ್ ಗ್ಲಾಸ್ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜೈಲಿನಲ್ಲಿ ಪವರ್ ಗ್ಲಾಸ್ಗೆ ಅವಕಾಶ ಇದೆ. ಅದೆಷ್ಟು ಪವರ್ ಇದೆ ಎಂದು ಡಾಕ್ಟರ್ ಚೆಕ್ ಮಾಡುತ್ತಿದ್ದಾರೆ. ದರ್ಶನ್ ಇರುವ ಬ್ಯಾರಕ್ನತ್ತ ಹೋಗಿಲ್ಲ. ಎಲ್ಲರಿಗೂ ಕೊಡುವ ಊಟವನ್ನೇ ದರ್ಶನ್ಗೂ ಕೊಡುತ್ತೇವೆ. ಕೈಯಲ್ಲಿದ್ದ ಖಡಗ ಟೈಟ್ ಆಗಿತ್ತು, ಹಾಗಾಗಿ ತೆಗೆಯಲಾಗಿತ್ತು. ವಿಚಾರಣಾಧೀನ ಕೈದಿ ಸಂಖ್ಯೆ ಮಾಧ್ಯಮದಲ್ಲಿ ಹೇಳುವ ವಿಚಾರವಲ್ಲ ಎಂದು ತಿಳಿಸಿದರು.
ಕೊಲೆ ಆರೋಪಿ ದರ್ಶನ್ ಅವರ ಕೈಯಲ್ಲಿ ಬಹಳ ವರ್ಷಗಳಿಂದ ಒಂದು ಕಡಗ ಇತ್ತು. ದೇವರ ಮೇಲಿನ ನಂಬಿಕೆ ಕೂಡ ಇದಕ್ಕೆ ಕಾರಣ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಷ್ಟು ಇದನ್ನು ತೆಗೆಸುವ ಕಾರ್ಯಕ್ಕೆ ಜೈಲಾಧಿಕಾರಿಗಳು ಮುಂದಾಗಿರಲಿಲ್ಲ. ಇದೀಗ ಬೆಂಗಳೂರಿಂದ ಬಳ್ಳಾರಿಗೆ ಜೈಲಿಗೆ ಶಿಫ್ಟ್ ಆಗುತ್ತಿದ್ದಂತೆ ಬಳ್ಳಾರಿ ಪೊಲೀಸು, ದರ್ಶನ್ ಕೈನಲ್ಲಿದ್ದ ಕಡಗವನ್ನೂ ತೆಗೆಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಯಿಂದ ಆಗದ ಕೆಲಸವನ್ನು ಬಳ್ಳಾರಿ ಜೈಲಾಧಿಕಾರಿ ಖಡಕ್ ಆಗಿ ಮಾಡಿ ತೋರಿಸಿದ್ದಾರೆ.