ಬೆಂಗಳೂರು:– ಪರಪ್ಪನ ಅಗ್ರಹಾರದಲ್ಲಿ ದರ್ಶನ್ಗೆ ರಾಜಾತಿಥ್ಯ ಕೇಸ್ ಗೆ ಸಂಬಧಪಟ್ಟಂತೆ ಕಾರಾಗೃಹ ಇಲಾಖೆ ಡಿಜಿಪಿಗೆ ನೋಟಿಸ್ ಜಾರಿ ಮಾಡಲಾಗಿದೆ.
ತ್ರಿವಳಿ ತಲಾಖ್ ರದ್ದತಿ ಮುಸ್ಲಿಂ ಮಹಿಳೆಯರಿಗೆ ದೊಡ್ಡ ಪರಿಹಾರ: ರಾಜನಾಥ್ ಸಿಂಗ್
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಈ ನೋಟಿಸ್ ನೀಡಲಾಗಿದೆ. ಜೈಲಿನಲ್ಲಿ ನಡೆದ ಅಕ್ರಮದ ಬಗ್ಗೆ ವಿವರಣೆ ನೀಡುವಂತೆ ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ನೋಟಿಸ್ ನೀಡಿರುವುದು ತಿಳಿದುಬಂದಿದೆ. ಕೃಷ್ಣಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ನೋಟಿಸ್ನಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರ ನೀಡುವಂತೆ ತಿಳಿಸಲಾಗಿದೆ.
ಜೈಲಿನ ಅಕ್ರಮ ತಡೆಗಟ್ಟುವ ವಿಚಾರದಲ್ಲಿ ನೀವು ಕೈಗೊಂಡ ಕ್ರಮಗಳೇನು? ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳು ನಿಮ್ಮ ಗಮನಕ್ಕೆ ಬಂದಿರಲಿಲ್ವಾ? ನೀವು ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದೀರಿ ಎಂದು ಏಕೆ ಭಾವಿಸಬಾರದು? ಮುಂತಾದ ಪ್ರಶ್ನೆಗಳಿಗೆ ವಿವರವಾದ ಉತ್ತರ ನೀಡುವಂತೆ ಮಾಲಿನಿ ಕೃಷ್ಣಮೂರ್ತಿಗೆ ತಾಕೀತು ಮಾಡಲಾಗಿದೆ. ಮಾಲಿನಿ ಕೃಷ್ಣಮೂರ್ತಿ ನೀಡುವ ಉತ್ತರವನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ.