ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್ ಬರುತ್ತಿದ್ದಂತೆ ಜೈಲ್ ಒಳಭಾಗದಲ್ಲಿದ್ದ ಕ್ಯಾಂಟೀನ್ ಕ್ಲೋಸ್ ಮಾಡಿಸಲಾಗಿದೆ. ಹೀಗಾಗಿ, ಜೈಲಿನಲ್ಲಿ ಏನು ಕೊಡುತ್ತಾರೋ ಅದನ್ನೇ ತಿಂದು ಬದುಕಬೇಕಾದ ಪರಿಸ್ಥಿತಿ ಬಂದೊದಗಿದೆ.
ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ: ಜೈಲಿನ ಅಧಿಕಾರಿಗಳು ಪಡೆದಿದ್ರಾ ಲಕ್ಷ-ಲಕ್ಷ ಹಣ!
ಒಪ್ಪಿಗೆ ಇರುವ ಕೆಲ ವಸ್ತುಗಳನ್ನು ಕ್ಯಾಂಟೀನ್ನಲ್ಲಿ ಇಡಲಾಗುತ್ತಿತ್ತು. ಇದನ್ನು ಖೈದಿಗಳು ಖರೀದಿ ಮಾಡುತ್ತಿದ್ದರು. ಈಗ ಕ್ಯಾಂಟೀನ್ ಇಲ್ಲದೆ ಕೇವಲ ಜೈಲು ಊಟ ಮಾಡುವ ಪರಿಸ್ಥಿತಿ ಬಂದೊದಗಿದೆ. ದರ್ಶನ್ ಅವರು ಬೆಂಗಳೂರಿನ ಜೈಲಿನಲ್ಲಿ ಇದ್ದಾಗ ಅವರಿಗೆ ಸಾಕಷ್ಟು ಸೌಕರ್ಯ ಮಾಡಿಕೊಡಲಾಗಿತ್ತು. ಹೀಗಾಗಿ, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇಲ್ಲಿ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಎಚ್ಚರಿಕೆ ವಹಿಸಲಾಗುತ್ತಿದೆ.
ಬಳ್ಳಾರಿ ಸೆಂಟ್ರಲ್ ಜೈಲನಲ್ಲಿ ದರ್ಶನ ಸೊಳ್ಳೆ ಕಾಟಕ್ಕೆ ಒದ್ದಾಡಿದ್ದಾರೆ. ಆಗಸ್ಟ್ 31ರ ರಾತ್ರಿ ಹೈ ಸೆಕ್ಯುರಿಟಿ ಜೈಲು ವಿಭಾಗದ ಪ್ಯಾಸೇಜ್ನಲ್ಲಿ ವಾಕ್ ಮಾಡಿದ್ದಾರೆ. ರಾತ್ರಿ ಅವರಿಗೆ ನಿದ್ದೆ ಬರುತ್ತಿಲ್ಲ. ಸದ್ಯ ಅವರು ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಿದ್ದಾರೆ.