ಬಾಂಗ್ಲಾದೇಶ (Bangladesh) ವಿರುದ್ಧದ ಟೆಸ್ಟ್ ಪಂದ್ಯಗಳ (Test Cricket) ಮುಂಚೆಯೇ ಭಾರತ ಆಟಗಾರ ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಕೈಗೆ ಗಂಭೀರ ಗಾಯವಾಗಿದೆ.
ಸೂರ್ಯಕುಮಾರ್ ಯಾದವ್ ಅವರು ಬುಚ್ಚಿ ಬಾಬು ಪಂದ್ಯಾವಳಿಯಲ್ಲಿ ಮುಂಬೈ (Mumbai) ತಂಡದ ಪರವಾಗಿ ಆಟವಾಡುತ್ತಿದ್ದಾರೆ. ತಮಿಳನಾಡು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಅವರ ಕೈಗೆ ಗಂಭೀರ ಗಾಯವಾಗಿದೆ.
ಸೆ.5 ರಿಂದ ನಡೆಯಲಿರುವ ದುಲೀಪ್ ಟ್ರೋಫಿಯಲ್ಲೂ (Duleep Trophy) ಸೂರ್ಯಕುಮಾರ್ ಅವರ ಹೆಸರಿದೆ. ಸೂರ್ಯಕುಮಾರ್ ಅವರ ಕೈ ಗಾಯ ಯಾವ ಪ್ರಮಾಣದ್ದು ಎನ್ನುವುದು ತಿಳಿದು ಬಂದಿಲ್ಲ
2024ರ ಟಿ20 ವಿಶ್ವಕಪ್ ಚಾಂಪಿಯನ್ ಆದ ನಂತರ ಭಾರತ ತಂಡವು ಶ್ರೀಲಂಕಾ ತಂಡದ ವಿರುದ್ಧ ಸರಣಿ ಪಂದ್ಯಗಳನ್ನಾಡಿತ್ತು. ಸೂರ್ಯಕುಮಾರ್ ಯಾದವ್ ನೇತೃತ್ವದ ಟಿ20 ತಂಡ ಚಾಂಪಿಯನ್ ಆಗಿತ್ತು. ಕೆಲ ದಿನಗಳ ಹಿಂದೆ ಸೂರ್ಯಕುಮಾರ್ ಯಾದವ್ ಟೆಸ್ಟ್ ಪಂದ್ಯಗಳಿಗೆ ಮರಳುವ ಬಗ್ಗೆ ಮಾತನಾಡಿದ್ದರು.
ಸೆ.19 ರಿಂದ ಚೆನ್ನೈನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಟೆಸ್ಟ್ ಸರಣಿ ಪಂದ್ಯಗಳು ಆಡಲಿದೆ. ದೇಶೀಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಆಯ್ಕೆಗಾರರು ಆಯ್ಕೆ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ಬಿಸಿಸಿಐ ಸೂರ್ಯಕುಮಾರ್ ಗಾಯದ ಬಗ್ಗೆ ಯಾವುದೇ ವಿವರ ನೀಡಿಲ್ಲ.