ಬೆಂಗಳೂರು:– ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡಿರುವ ರಾಜ್ಯ ‘ಸರ್ಕಾರ’ ಬ್ರಾಂಡ್ ಬೆಂಗಳೂರನ್ನಾಗಿಸುವುದು ಹಾಸ್ಯಾಸ್ಪದ ಎಂದು ಬಿಜೆಪಿ ವ್ಯಂಗ್ಯವಾಡಿದರು.
Vijayalakshmi: ದರ್ಶನ್ ಗಾಗಿ ಜೈಲಿಗೆ 2-3 ಬ್ಯಾಗ್ ತಂದ ವಿಜಯಲಕ್ಷ್ಮಿ: ವಿಡಿಯೋ ನೋಡಿ!
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಗುತ್ತಿಗೆದಾರರಿಗೆ ಬಾಕಿ ಬಿಲ್ಗಳನ್ನು ಪಾವತಿಸಲು ಯೋಗ್ಯತೆಯಿಲ್ಲದ ಕಾಂಗ್ರೆಸ್ ಸರ್ಕಾರ, ಬೆಂಗಳೂರನ್ನು ಬ್ರಾಂಡ್ ಬೆಂಗಳೂರನ್ನಾಗಿಸುತ್ತದೆ ಎನ್ನುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ್ದಾರೆ.
ಬ್ರಾಂಡ್ ಬೆಂಗಳೂರು ಕೇವಲ ಹೆಸರಿಗೆ ಮತ್ತು ಜಾಹೀರಾತಿಗೆ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ. ಗುತ್ತಿಗೆದಾರರಿಗೆ ಬಾಕಿ ಬಿಲ್ಗಳನ್ನು ಪಾವತಿಸಲು ಯೋಗ್ಯತೆಯಿಲ್ಲದ ಸರ್ಕಾರ, ಬೆಂಗಳೂರನ್ನು ಬ್ರಾಂಡ್ ಬೆಂಗಳೂರನ್ನಾಗಿಸುತ್ತದೆ ಎನ್ನುವುದು ಹಾಸ್ಯಾಸ್ಪದ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಾಕಿ ಬಿಲ್ ಪಾವತಿಯಾಗಿಲ್ಲ ಎಂದು ಗುತ್ತಿಗೆದಾರರರು ಮುಷ್ಕರಕ್ಕೆ ಇಳಿಯುತ್ತಿರುವುದು ಇದು ಎರಡನೇ ಬಾರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಷ್ಟೇಅಲ್ಲ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಶಿಕ್ಷಣ ಇಲಾಖೆ ಅಧೋಗತಿ ತಲುಪಿದ್ದು, ರಾಜ್ಯಾದ್ಯಂತ 3,819 ಶಾಲಾ ಕಟ್ಟಡಗಳು ಶಿಥಿಲಾವಸ್ಥೆಗೊಂಡು, ಕುಸಿಯಲು ಕ್ಷಣಗಣನೇ ಎಣಿಸುತ್ತಿವೆ. ಕೈಲಾಗದ ಸರ್ಕಾರ ಸಂವೇದನೆ, ದೂರದೃಷ್ಟಿ ಕಳೆದುಕೊಂಡ ಪರಿಣಾಮ ಮಳೆಗಾಲದಲ್ಲಿ ಶಾಲಾ ಕೊಠಡಿಗಳ ಪರಿಸ್ಥಿತಿ ಹೇಳತಿರದಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ದಿವ್ಯ ನಿರ್ಲಕ್ಷ್ಯದಿಂದ ಮಕ್ಕಳು ಜೀವಭಯದಲ್ಲಿ ಪಾಠ ಕೇಳಬೇಕಾಗಿದೆ ಎಂದು ಕಿಡಿಕಾರಿದ್ದಾರೆ.