ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸುಹಾಸ್ ಎಲ್ ಯತಿರಾಜ್ ಅವರು ಫೈನಲ್ ಪ್ರವೇಶ ಮಾಡಿದ್ದಾರೆ. ಆ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ಖಚಿತಪಡಿಸಿದ್ದಾರೆ.
ಈ ಹಿನ್ನೆಲೆ X ಮಾಡಿರುವ ಸಿಎಂ ಸಿದ್ದರಾಮಯ್ಯ, ಪುರುಷರ ಸಿಂಗಲ್ಸ್ SL4 ಪ್ಯಾರಾ-ಬ್ಯಾಡ್ಮಿಂಟನ್ನಲ್ಲಿ ಫೈನಲ್ ತಲುಪುವ ಮೂಲಕ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಪದಕವನ್ನು ಖಚಿತಪಡಿಸಿದ್ದಕ್ಕಾಗಿ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು.
https://x.com/siddaramaiah/status/1830587696621793754
ಹಾಸನದ ನಮ್ಮ ಸ್ವಂತ ಮಣ್ಣಿನ ಮಗನಾಗಿ ಮತ್ತು NITK ಸುರತ್ಕಲ್ ಹಳೆಯ ವಿದ್ಯಾರ್ಥಿಯಾಗಿ, ಕರ್ನಾಟಕ ಮತ್ತು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ಕ್ಷಣ, ರಾಷ್ಟ್ರಕ್ಕೆ ಕೀರ್ತಿ ತಂದಿದೆ. ನಿಮ್ಮ ಸಾಧನೆ ನಿಮ್ಮ ಶ್ರದ್ಧೆ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ. ಅಂತಿಮ ಪಂದ್ಯಕ್ಕೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.