ಬೆಂಗಳೂರು:- ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ – ದರ್ಶನ್ ಗ್ಯಾಂಗ್ ವಿರುದ್ಧ ಇಂದೇ ಚಾರ್ಜ್ಶೀಟ್ ಸಲ್ಲಿಕೆ!
ದೋಷಾರೋಪ ಪಟ್ಟಿಯಲ್ಲಿ ದರ್ಶನ್ ಅವರನ್ನು 2ನೇ ಆರೋಪಿ ಎಂದೇ ದಾಖಲಿಸಲಾಗಿದ್ದು, ಪವಿತ್ರಾ 1ನೇ ಆರೋಪಿಯಾಗಿದ್ದಾರೆಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಜೂನ್ 9 ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೂನ್ 11 ರಂದು ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು.
ಚಾರ್ಜ್ಶೀಟ್ ಸಲ್ಲಿಕೆ ವಿಚಾರದಿಂದ ದರ್ಶನ್ ಟೆನ್ಷನ್ ಆಗಿದ್ದಾರೆ. ಅವರು ನಿದ್ರೆ ಇಲ್ಲದೇ ಎಚ್ಚರವಾಗೇ ಕಾಲ ಕಳೆದಿದ್ದಾರೆ. ಅವರು ಊಟವನ್ನೂ ಸರಿಯಾಗಿ ಮಾಡಿಲ್ಲ ಎಂದು ವರದಿ ಆಗಿದೆ. ಜಾರ್ಜ್ಶೀಟ್ ಸಲ್ಲಿಕೆ ಬಳಿಕ ಏನಾಗುತ್ತದೆ ಎನ್ನುವ ಟೆನ್ಷನ್ ಅವರನ್ನು ಕಾಡುತ್ತಿದೆ.