ಧಾರವಾಡ: ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ಬಿಜೆಪಿಯದ್ದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ಬಿಜೆಪಿಯದ್ದು. ಆದರೆ ಇದರಲ್ಲಿ ಅದು ಯಶಸ್ವಿಯಾಗಲ್ಲ ಎಂದು ವಸತಿ ಸಚಿವ ಜಮೀರ ಅಹಮದ್ ಖಾನ್ ಹೇಳಿದರು.
ವಾಹನ ಸವಾರರ ಗಮನಿಸಿ.. ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
ಇಲ್ಲಿಯ ಧಾರವಾಡ ಗ್ರಾಮೀಣ ಮತ್ತು ಹು-ಧಾ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ 9 ಸ್ಥಾನಗಳನ್ನು ಮಾತ್ರ ಗೆದ್ದಿರಬಹುದು. ಆದರೆ ನಮ್ಮ ಮತಗಳಿಕೆ ಗಣನೀಯವಾಗಿ ಹೆಚ್ಚಿದೆ. ಶೇ.11ರಷ್ಟು ಮತಗಳಿಕೆಯಲ್ಲಿ ಹೆಚ್ಚಾಗಿದೆ. ಇದಕ್ಕೆ ಗ್ಯಾರಂಟಿ ಸ್ಕೀಂಗಳೇ ಕಾರಣ. ಇದು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದರು.