ಬೆಂಗಳೂರು:- ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ: ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ಹೇಳಿದಿಷ್ಟು!
ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಲಾ ಶಿಕ್ಷಕರ ಸಂಘಟನೆಗಳ ನಿಯೋಗದ ಜೊತೆ ಸಭೆ ನಡೆಯಿತು. ಸಭೆಯಲ್ಲಿ ಹಲವು ಬೇಡಿಕೆಗಳನ್ನ ಶಿಕ್ಷಕರು ಮುಂದಿಟ್ಟಿದ್ದು, ಒಂದು ತಿಂಗಳ ಒಳಗಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
ಸಭೆಯಲ್ಲಿ ತಮ್ಮ ಬೇಡಿಕೆಗಳನ್ನ ನಿಯೋಗ ಸಿಎಂಗೆ ಮಂಡಿಸಿತು. 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು ಎಂದು ಹೇಳಿತು.
ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆಂದು ಹಿಂಬಡ್ತಿ ನೀಡಲಾಗಿದೆ. ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಠತೆಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿತು. ನಿಯೋಗದ ಮನವಿ ಆಲಿಸಿದ ಸಿಎಂ ಒಂದು ತಿಂಗಳ ಒಳಗೆ ಸಮಸ್ಯೆ ಪರಿಹಾರ ನೀಡುವುದಾಗಿ ಭರವಸೆ ಕೊಟ್ಟರು.
ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಡ್ತಿ, ಮುಂಬಡ್ತಿ ವಿಚಾರವಾಗಿ ಶಿಕ್ಷಕರ ಬೇಡಿಕೆಗಳು ಇತ್ತು. ಸಿಎಂ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ಆಗಿದೆ. ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚನೆ ಮಾಡಿ ಆ ಸಮಿತಿಯಲ್ಲಿ ಸಂಘಟನೆಯವರನ್ನು ಸೇರಿಸಿಕೊಂಡು ಸಮಸ್ಯೆ ಪರಿಹಾರ ಮಾಡುತ್ತೇವೆ. ಸಿಎಂ ಕೂಡಾ ಸಮಸ್ಯೆ ಪರಿಹಾರ ಮಾಡಲು ಸೂಚನೆ ನೀಡಿದ್ದಾರೆ. ಕಾನೂನಿನ ವಿಚಾರಗಳನ್ನ ನೋಡಿಕೊಂಡು ಆದಷ್ಟು ಬೇಗ ಕ್ರಮ ಕೈಗೊಳ್ಳುತ್ತೇವೆ ಎಂದರು.