ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ಆಗಿದ್ದು ಪ್ರಕರಣದ ಬಗೆಗಿನ ಹಲವು ಮಹತ್ವದ ವಿಷಯಗಳು ಬಹಿರಂಗಗೊಂಡಿವೆ. ಈಗ ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ದರ್ಶನ್ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಲು ರೆಡಿ ಆಗಿದ್ದಾರೆ. ವಿಜಯಲಕ್ಷ್ಮೀ ಅವರು ಸೆಪ್ಟೆಂಬರ್ 5ರಂದು ಜೈಲಿಗೆ ಬಂದು ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ಬೇಲ್ ವಿಚಾರವಾಗಿ ಚರ್ಚೆ ಮಾಡಿದ್ದಾರೆ.
ವಿಜಯಲಕ್ಷ್ಮೀ ಹಾಗೂ ದರ್ಶನ್ ಸಹೋದರ ದಿನಕರ್ ಬಳ್ಳಾರಿ ಸೆಂಟ್ರಲ್ ಜೈಲಿಗೆ ಭೇಟಿ ಮಾಡಿದ್ದರು. ಈ ವೇಳೆ ಮಹತ್ವದ ಚರ್ಚೆ ನಡೆದಿದೆ. ಮಾತುಕತೆ ವೇಳೆ ಜಾರ್ಜ್ ಶೀಟ್ನಲ್ಲಿರುವ ಅಂಶಗಳ ಬಗ್ಗೆ ದರ್ಶನ್ಗೆ ಮಾಹಿತಿ ನೀಡುವ ಕೆಲಸ ಆಗಿದೆ. ಇದಕ್ಕೂ ಮೊದಲು ದರ್ಶನ್ ಅವರು ದೂರವಾಣಿ ಮೂಲಕ ವಕೀಲರ ಜೊತೆ ಮಾತನಾಡಿದ್ದರು. ಈ ವೇಳೆ ಜಾಮೀನಿನ ವಿಚಾರವಾಗಿ ಚರ್ಚೆ ನಡೆದಿದೆ.
Shivamogga Airport: ಮುಚ್ಚುತ್ತಾ ಶಿವಮೊಗ್ಗ ವಿಮಾನ ನಿಲ್ದಾಣ?: ಇನ್ನು ಒಂದು ತಿಂಗಳು ಮಾತ್ರ ಕಾರ್ಯಾಚರಣೆ !
ವಿಜಯಲಕ್ಷ್ಮೀ ಜೊತೆ ವಕೀಲರು ಬೇಲ್ ಅರ್ಜಿ ಕಳುಹಿಸಿದ್ದರು. ವಕೀಲರ ಜೊತೆ ಮಾತುಕತೆ ಬಳಿಕ ಬೇಲ್ ದರ್ಶನ್ ಅರ್ಜಿಗೆ ಸಹಿಹಾಕಿದ್ದರು. ವಿಜಯಲಕ್ಷ್ಮೀ ಹಾಗೂ ದಿನಕರ್ ಸಹಿ ಪಡೆದು ಹೋದ ಬಳಿಕ ಜೈಲಿಗೆ ನೋಟರಿ ಬಂದಿದೆ. ಸರ್ಕಾರಿ ನೋಟರಿಯವರು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಜಾಮೀನು ಅರ್ಜಿ ಹಾಗೂ ಅಫಿಡವಿಟ್ ರೆಡಿ ಮಾಡಿದ್ದಾರೆ.