ಬಾಗಲಕೋಟೆ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ತಡರಾತ್ರಿ ನಡೆದಿದೆ. ಸ್ಕೂಟಿಯಲ್ಲಿದ್ದ ಗೆಳತಿಯರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇನೊಂದು ಬೈಕ್ನಲ್ಲಿದ್ದ ಇಬ್ಬರು ಯುವಕರ ಪೈಕಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಾಯವಾಗಿದೆ.
ನವನಗರದ ಅಬಕಾರಿ ಇಲಾಖೆ ಸಮೀಪದಲ್ಲಿ ನಡೆದಿರುವ ಘಟನೆ ಇದಾಗಿದೆ. ಪ್ರೊಫೆಸರ್ ಕೃತಿಕಾ ಒಂಟಕುದರಿ (32), ಸ್ನೇಹಿತೆ ರಜನಿ ಒಂಟಕುದರಿ (34), ಅಭಿಷೇಕ ಬಂಡಿವಡ್ಡರ ಮೃತರು ಎಂದು ಗುರುತಿಸಲಾಗಿದೆ.ಕೃತಿಕಾ ಖಾಸಗಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು. ರಜನಿ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
Gowri Bagina: ಗೌರಿ ಬಾಗಿನದಲ್ಲಿ ಇರಲೇಬೇಕಾದ ವಸ್ತುಗಳ ಬಗ್ಗೆ ಗೊತ್ತೇ..? ಇಲ್ಲಿದೆ ನೋಡಿ
ಕೆಲಸ ಮುಗಿಸಿ ಸ್ನೇಹಿತೆ ಜೊತೆಗೆ ಸ್ಕೂಟಿಯಲ್ಲಿ ಹೊರಟಿದ್ದ ವೇಳೆ ಬೈಕ್ ನಲ್ಲಿ ಕಾಳಿದಾಸ್ ಸರ್ಕಲ್ ನಿಂದ ಬಸ್ ನಿಲ್ದಾಣದ ಕಡೆಗೆ ಹೊರಟಿದ್ದ ಯುವಕರು ವೇಗವಾಗಿ ಬಂದು ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಲ್ಲಿ ರಜನಿ, ಅಭಿಷೇಕ್ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಕೃತಿಕಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.