ಕೊಪ್ಪಳ:- ಜಿಲ್ಲೆಯ ಕಾಳಿದಾಸನಗರದಲ್ಲಿ ಜಿಲ್ಲಾಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಶ್ರೀಕಾಂತ ಎಂಬುವವರ ಶವ ಬೆತ್ತಲೆ ಸ್ಥಿತಿಯಲ್ಲಿ ವಾಸವಿದ್ದ ಮನೆಯಲ್ಲಿ ಪತ್ತೆ ಆಗಿರುವಂತಹ ಘಟನೆ ಜರುಗಿದೆ.
ನಿತ್ಯ ಸೊಂಟ ನೋವಿನಿಂದ ಬಳಲುತ್ತಿದ್ದೀರಾ!?, ಹಾಗಿದ್ರೆ ಕೆಲವು ಟಿಪ್ಸ್ ನಿಮಗಾಗಿ!
ಶ್ರೀಕಾಂತ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮದ್ಯ ವ್ಯಸನಿಯಾಗಿದ್ದರು ಎಂಬ ಮಾಹಿತಿಯಿದೆ. ಕಳೆದ 4 ದಿನಗಳಿಂದ ಬಾಡಿಗೆ ಮನೆಯ ಬಾಗಿಲು ತೆಗೆದಿರಲಿಲ್ಲ. ಅತಿಯಾಗಿ ಮದ್ಯ ಸೇವಿಸಿ ಮಲಗಿದ್ದಲ್ಲೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ದುರ್ವಾಸನೆ ಬರುತ್ತಿದ್ದರಿಂದ ಪೊಲೀಸರಿಗೆ ಸ್ಥಳೀಯರಿಂದ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಮನೆ ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ಶ್ರೀಕಾಂತ ಕುಟುಂಬದ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿಲ್ಲ. ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.