ಬೆಂಗಳೂರು:– ಕರ್ನಾಟಕದಾದ್ಯಂತ ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿಯನ್ನು ಕೂರಿಸಿ, ವಿಶೇಷ ಅಲಂಕಾರ ಮಾಡಿ, ಪೂಜಿಸಲಾಗುತ್ತದೆ. ಸರ್ವ ವಿಘ್ನಗಳನ್ನು ನಿವಾರಣೆ ಮಾಡು ಎಂದು ವಿಘ್ನನಿವಾರಕನಲ್ಲಿ ಪಾರ್ಥಿಸಲಾಗುತ್ತದೆ.
Breaking News: ಮಹಿಳೆಯರು ಹೀಗೆ ಮಾಡಿದ್ರೆ ಸರ್ಕಾರದಿಂದಲೇ ಬರುತ್ತೆ ಮಂತ್ಲಿ ಹಣ!
ಅದರಂತೆ ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಜರುಗಿದೆ. ಮುಂಜಾನೆಯಿಂದಲೇ ದೊಡ್ಡಗಣಪನಿಗೆ ವಿಶೇಷ ಪೂಜೆ ಮಾಡಲಾಗುತ್ತಿದೆ.
ಹಬ್ಬದ ಪ್ರಯುಕ್ತ ಗಣೇಶನಿಗೆ ಬೆಳ್ಳಿ ಅಲಂಕಾರ ಮಾಡಲಾಗಿದ್ದು, ಗಣೇಶ ಹಬ್ಬದ ಪ್ರಯುಕ್ತ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ವಿಘ್ನೇಶ್ವರ ನ ದರ್ಶನ ಪಡೆಯುತ್ತಿದ್ದಾರೆ.