ಬೆಂಗಳೂರು:- ಒಂದಲ್ಲ ಒಂದು ದಿನ ನಾನು ಮುಖ್ಯಮಂತ್ರಿ ಆಗೇ ಆಗ್ತೀನಿ, ಇದರಲ್ಲಿ ನೋ ಡೌಟ್ ಎಂದು ಸಚಿವ MB ಪಾಟೀಲ್ ಹೇಳಿದ್ದಾರೆ.
ಕುಂತು, ಕುಂತು ನೋವು ಬಂದಿದೆ: ಈ ಬಸ್ ನ ಫಸ್ಟ್ ಗುಜರಿಗೆ ಹಾಕಿ, ಪ್ರಯಾಣಿಕ ಕಿಡಿ!
ಎಂ ಬಿ ಪಾಟೀಲ್ ಸಿಎಂ ಆಗುವುದಿಲ್ಲ’ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ಈಗ ನಾನು ಸಿಎಂ ಆಗುವ ಸನ್ನಿವೇಶ ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ, ಮುಂದೆಯೂ ಸಿಎಂ ಆಗಿಯೇ ಇರುತ್ತಾರೆ. ನಾನೂ ಹಿರಿಯನಿದ್ದೇನೆ. ಒಂದಲ್ಲಾ ಒಂದು ದಿನ ರಾಜ್ಯದ ಮುಖ್ಯಮಂತ್ರಿಯಾಗುವೆ” ಎಂದರು.
ಶಿವಾನಂದ ಪಾಟೀಲರು ಸಿಎಂ ಆಗಲ್ಲ, ಅವರು ಜೆಡಿಎಸ್ ನಿಂದ ಬಂದವರು. ಬದಲಾಗಿ ವಿಜಯಪುರದಿಂದ ಸಿಎಂ ಆಗೋದು ನಾನೇ” ಎಂದು ಪರೋಕ್ಷವಾಗಿ ಕುಟುಕಿದರು.
ನಾನು ಗೃಹ ಸಚಿವನಾಗಿದ್ದೆ. ಆಗಲೂ ಜೈಲಿನಲ್ಲಿ ಇಂತ ವ್ಯವಸ್ಥೆ ನೋಡಿದ್ದೇನೆ. ಘಟನೆಯನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅದಕ್ಕಾಗಿ ದರ್ಶನ್ ಅಂಡ್ ಟೀಮ್ ಚದುರಿಸಲಾಗಿದೆ. ಚದುರಿಸಿ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ” ಎಂದರು.
“ಮುಡಾ ಸೈಟ್ ಹಂಚಿಕೆ ಆಗಿದ್ದು ಬಿಜೆಪಿ ಅವಧಿಯಲ್ಲಿ. ಇದರಲ್ಲಿ ಸಿದ್ದರಾಮಯ್ಯನವರ ಪಾಲೇನಿದೆ. ಮುಡಾದಿಂದ ಯಾರು ಭಯಗೊಂಡಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡ್ತಿದ್ದೇವೆ. ಇದರಲ್ಲಿ ನಮಗೆ ಜಯ ಸಿಕ್ಕೇ ಸಿಗುತ್ತದೆ. ಹಗಲು ಗನಸು ಬೇಡ. ಆದರೆ ಗವರ್ನರ್ ನಡವಳಿಕೆ ಮಾತ್ರ ಕಾನೂನು ಬಾಹಿರ” ಎಂದು ತಿಳಿಸಿದರು.