ಬಳ್ಳಾರಿ: ಇಲ್ಲಿನ ಸೆಂಟ್ರಲ್ ಜೈಲಿನಲ್ಲಿರೋ ಕೊಲೆ ಆರೋಪಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ 5 ನಿಮಿಷಗಳ ಕಾಲ ಮಾತನಾಡಿದ್ದಾರೆ. ಹೈಸೆಕ್ಯೂರಿಟಿ ಸೆಲ್ನಿಂದಲೇ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಮಾತನಾಡಿದ ದರ್ಶನ್, ಪತ್ನಿ ವಿಜಯಲಕ್ಷ್ಮಿ ಜೊತೆ ಮುಂದಿನ ಕಾನೂನು ಹೋರಾಟದ ಬಗ್ಗೆಯೇ ಚರ್ಚಿಸಿದ್ದಾರೆ. ಇದೇ ವೇಳೆ ಪತ್ನಿ ಜೊತೆ ಮಾತನಾಡುವಾಗ ಆರೋಪಿ ದರ್ಶನ್ ಭಾವುಕರಾಗಿದ್ದಾರೆ.
ಇಂದು ಜೈಲಿಗೆ ಬರುವಂತೆ ಪತ್ನಿಗೆ ಆರೋಪಿ ತಿಳಿಸಿದ್ದಾರೆ. ಈ ಬಗ್ಗೆ ಜೈಲಾಧಿಕಾರಿಗಳಿಗೂ ದರ್ಶನ್ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ತಾಯಿ ಮೀನಾ ಇಂದು ಸಂಜೆ 4 ಗಂಟೆಯ ನಂತರ ಬಳ್ಳಾರಿ ಸೆಂಟ್ರಲ್ ಜೈಲಿಗೆ ಬರಲಿದ್ದಾರೆ ಎಂದು ಜೈಲಾಧಿಕಾರಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಫಾಸ್ಟ್ಟ್ರ್ಯಾಕ್ ಕೋರ್ಟ್ ಅಥವಾ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂಬ ಕೂಗೆದ್ದಿದೆ.
Indian Railway: IRCTC ID ಯಿಂದ ಬೇರೆಯವರಿಗೆ ಟಿಕೆಟ್ ಬುಕ್ ಮಾಡಿಕೊಟ್ಟರೆ ಬೀಳುತ್ತೆ ಭಾರೀ ದಂಡ!
ಈ ನಿಟ್ಟಿನಲ್ಲಿನ ರಾಜ್ಯ ಸರ್ಕಾರ ಕೂಡ ಚಿಂತನೆ ನಡೆಸಿದೆ. ಇನ್ನೂ ದರ್ಶನ್ ಸೇರಿ ಆರೋಪಿಗಳ ಪರ ವಕೀಲರು, ಚಾರ್ಜ್ಶೀಟ್ ಪರಿಶೀಲನೆ ಮಾಡ್ತಿದ್ದು, ಶೀಘ್ರವೇ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ. ದರ್ಶನ್ ಪರ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮಧ್ಯೆ, ದರ್ಶನ್ ಬಿಡುಗಡೆಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ಅಸ್ಸಾಂನ ಕಾಮಾಕ್ಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.