ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಪೂರ್ಣಗೊಳ್ಳಲಿದೆ.
ಸೆಪ್ಟೆಂಬರ್ 9ರಂದು ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. ಈ ವೇಳೆ ಚಾರ್ಜ್ಶೀಟ್ ಪ್ರತಿಯನ್ನು ಆರೋಪಿ ಪರ ವಕೀಲರಿಗೆ ನೀಡಲಾಗಿತ್ತು. ಆ ಬಳಿಕ ಜಡ್ಜ್ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಣೆ ಮಾಡಿದ್ದರು.
ಸೆಪ್ಟೆಂಬರ್ 9ರಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರಾಗಿದ್ದ ಸರ್ಕಾರಿ ಪರ ವಕೀಲ ಪ್ರಸನ್ನ ಕುಮಾರ್ ಅವರು ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ಸಾಕ್ಷ್ಯಾಧಾರಗಳ ಸಲ್ಲಿಕೆ ಮಾಡಿದ್ದರು. ಇವುಗಳನ್ನು ಜಡ್ಜ್ ಪರಿಶೀಲನೆ ಮಾಡುವುದಾಗಿ ಹೇಳಿದ್ದರು. ಇನ್ನು ಶೀಘ್ರವೇ ದರ್ಶನ್ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಲಿದ್ದಾರೆ..
ಪೂರ್ತಿ ಚಾರ್ಜ್ಶೀಟ್ ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ದರ್ಶನ್ ಪರ ವಕೀಲ ಶಿವಕುಮಾರ್ ಅವರು ಹೇಳಿದ್ದರು.