ಬೆಂಗಳೂರು:- ನಗರದಲ್ಲಿ ತಡರಾತ್ರಿ ರಸ್ತೆ ಅಪಘಾತ ಸಂಭವಿಸಿದ್ದು, ಹಿಟ್ ಆ್ಯಂಡ್ ರನ್ಗೆ ಮೂವರು ಬಲಿಯಾದ ಘಟನೆ ಜರುಗಿದೆ.
ರಾಜ್ಯ ಸರ್ಕಾರದ ದಿಟ್ಟ ಕ್ರಮ: ಇನ್ಮುಂದೆ ಈ ತಪ್ಪು ಮಾಡಿದ್ರೆ ದಂಡದ ಜೊತೆ ಜೈಲು ಸೇರೋದು ಪಕ್ಕಾ!
ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ಜರುಗಿದೆ. ಮೂವರು ಯುವಕರು ಬೈಕ್ನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಹಿತ್(22), ಸುಚಿತ್(22), ಹರ್ಷ(22) ಮೃತ ವಿದ್ಯಾರ್ಥಿಗಳು ಎನ್ನಲಾಗಿದೆ.
ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.